ಗರುಡಾ ಮಾಲ್ 
ರಾಜ್ಯ

ಕೋವಿಡ್ ಸುರಕ್ಷತಾ ನಿಯಮ ಉಲ್ಲಂಘನೆ: ರೂಲ್ಸ್ ಪಾಲಿಸದ ಗರುಡಾ ಮಾಲ್ ಗೆ ದಂಡ

ಕೋವಿಡ್‌ ನಿಯಮಾವಳಿಗಳನ್ನು ಪಾಲಿಸದ ಗರುಡಾ ಮಾಲ್‌ಗೆ ನೋಟಿಸ್‌ ಜಾರಿ ಮಾಡಿರುವ ಬಿಬಿಎಂಪಿ ಆರೋಗ್ಯಾಧಿಕಾರಿಗಳು 20 ಸಾವಿರ ರೂ. ದಂಡ ವಿಧಿಸಿದ್ದಾರೆ.

ಬೆಂಗಳೂರು: ಕೋವಿಡ್‌ ನಿಯಮಾವಳಿಗಳನ್ನು ಪಾಲಿಸದ ಗರುಡಾ ಮಾಲ್‌ಗೆ ನೋಟಿಸ್‌ ಜಾರಿ ಮಾಡಿರುವ ಬಿಬಿಎಂಪಿ ಆರೋಗ್ಯಾಧಿಕಾರಿಗಳು 20 ಸಾವಿರ ರೂ. ದಂಡ ವಿಧಿಸಿದ್ದಾರೆ.

ಕೊರೋನಾ ವೈರಾಣುವಿನ ರೂಪಾಂತರಿ ಓಮಿಕ್ರಾನ್‌ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಮಗಳನ್ನು ಬಿಗಿಗೊಳಿಸಿದ್ದು, ಮಾಲ್‌ ಹಾಗೂ ಸಿನಿಮಾ ಮಂದಿರ ಪ್ರವೇಶಿಸುವ ಸಾರ್ವಜನಿಕರು ಎರಡು ಡೋಸ್‌ ಲಸಿಕೆ ಪಡೆದಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು.

ಲಸಿಕೆ ಪಡೆಯದವರಿಗೆ ಪ್ರವೇಶ ನೀಡಬಾರದೆಂದು ಸೂಚಿಸಲಾಗಿದೆ. ಆದರೆ, ಅಶೋಕ ನಗರದಲ್ಲಿ ಇರುವ ಗರುಡಾ ಮಾಲ್‌ನಲ್ಲಿ ಕೋವಿಡ್‌ ಸುರಕ್ಷತ್ ಕ್ರಮದ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ.

ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಲ್‌ಗೆ 20 ಸಾವಿರ ರೂ. ದಂಡ ಹಾಕಲಾಗಿದೆ. ಕೋವಿಡ್‌ ನಿಯಮ ಪಾಲನೆ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ನೋಟಿಸ್‌ ನೀಡಲಾಗಿದೆ.

ನಾವು ಕಳೆದ ವಾರ ಗರುಡಾ ಮಾಲ್‌ನಲ್ಲಿ ತಪಾಸಣೆ ನಡೆಸಿದ್ದೇವು, ಆಗ ಅಲ್ಲಿ ಎಲ್ಲಾ ಮಾರ್ಗ ಸೂಚಿಗಳನ್ನು ಅನುಸರಿಸಲಾಗುತ್ತಿತ್ತು. ಆದರೆ ನಿನ್ನೆ (ಶನಿವಾರ), ಮಾಲ್ ಗೆ ಭೇಟಿ ನೀಡಿದ ವೇಳೆ ಸಂದರ್ಶಕರು ಎರಡು  ಲಸಿಕೆ ತೆಗೆದುಕೊಂಡಿದ್ದಾರೆಯೇ ಎಂಬ ಬಗ್ಗೆ ಅವರು ಪರಿಶೀಲನೆ ನಡೆಸುತ್ತಿರಲಿಲ್ಲ ಎಂಬುದು ನಮಗೆ ತಿಳಿದು ಬಂತು. ಇದಕ್ಕಿಂತ ಹೆಚ್ಚಾಗಿ, ಮಳಿಗೆಗಳಲ್ಲಿನ ಸಿಬ್ಬಂದಿಗಳು ಮಾಸ್ಕ್ ಧರಿಸಿರಲಿಲ್ಲ ಮತ್ತು ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಅನುಸರಿಸಲಿಲ್ಲ ಎಂದು ಬಿಬಿಎಂಪಿ ಮುಖ್ಯ ಆರೋಗ್ಯ ಅಧಿಕಾರಿ ಡಾ. ಬಾಲಸುಂದರ್ ಎ ಎಸ್ ಹೇಳಿದರು.

ಲಸಿಕೆ ಸ್ಥಿತಿಯನ್ನು ಹೇಗೆ ಪರಿಶೀಲಿಸುವುದು ಎಂಬುದರ ಕುರಿತು ಮಾಲ್‌ಗಳಿಗೆ ಪ್ರಾತ್ಯಕ್ಷಿಕೆಯನ್ನು ಬಿಬಿಎಂಪಿಯು ಆಯೋಜಿಸಿದೆ ಎಂದು ಅವರು ಹೇಳಿದರು. "ಕೆಲವು ವಾರಗಳ ಹಿಂದೆ ಆದೇಶವನ್ನು ನೀಡಲಾಗಿತ್ತು, ಮತ್ತು ತಪಾಸಣೆಯು ಸ್ವತಃ ಒಬ್ಬ ವ್ಯಕ್ತಿಗೆ ಕೇವಲ ಒಂದು ನಿಮಿಷವನ್ನು ತೆಗೆದುಕೊಳ್ಳುತ್ತದೆ, ಆದ್ದರಿಂದ ಸಂದರ್ಶಕರು ಲಸಿಕೆ ಹಾಕಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ವಿಫಲವಾಗಿರುವುದರ ಹಿನ್ನೆಲೆಯಲ್ಲಿ ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT