ವಿಮ್ಸ್ 
ರಾಜ್ಯ

ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳಲ್ಲಿ 358 ನವಜಾತ ಶಿಶುಗಳ ಸಾವು!

ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎಂಟು ತಿಂಗಳಲ್ಲಿ 358 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ಬೆಳವಣಿಗೆಯು ಆತಂಕ ಹೆಚ್ಚಾಗುವಂತೆ ಮಾಡಿದೆ.

ಬಳ್ಳಾರಿ: ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎಂಟು ತಿಂಗಳಲ್ಲಿ 358 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ಬೆಳವಣಿಗೆಯು ಆತಂಕ ಹೆಚ್ಚಾಗುವಂತೆ ಮಾಡಿದೆ.

ವಿಜಯನಗರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ವಿಮ್ಸ್) ಒಂದರಲ್ಲಿಯೇ 8 ತಿಂಗಳಿನಲ್ಲಿ 293 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಒಂದೇ ದಿನ 6 ನವಜಾತ ಶಿಶುಗಳು ಸಾವನ್ನಪ್ಪಿರುವುದು ದಾಖಲಾಗಿದೆ. ಏಪ್ರಿಲ್ 2020 ಮತ್ತು ನವೆಂಬರ್ 2021 ರ ನಡುವೆ, ಬಳ್ಳಾರಿ ಜಿಲ್ಲೆಯಲ್ಲಿ 358 ನವಜಾತ ಶಿಶುಗಳ ಸಾವುಗಳು ವರದಿಯಾಗಿವೆ ಎಂದು ತಿಳಿದುಬಂದಿದೆ.

ಆದಾಗ್ಯೂ, ಈ ರೀತಿಯ ಶಿಶು ಮರಣ ಪ್ರಮಾಣ ಸಾಮಾನ್ಯ (ಐಎಂಆರ್)ವಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಸಂಖ್ಯೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

358 ರಲ್ಲಿ, 293 ಸಾವುಗಳು ವಿಮ್ಸ್‌ನಲ್ಲಿಯೇ ಸಂಭವಿಸಿದೆ. ಉಳಿದ 65 ವಿಜಯನಗರ ಜಿಲ್ಲೆಯಲ್ಲಿ ಸಂಭವಿಸಿದೆ. ಕಡಿಮೆ ತೂಕ, ಮಗು ಮತ್ತು ತಾಯಿಯ ಅನಾರೋಗ್ಯ ಸೇರಿದಂತೆ ಹಲವಾರು ಕಾರಣಗಳು ಸಾವಿನ ಹಿಂದಿನ ಪ್ರಮುಖ ಕಾರಣಗಳಾಗಿವೆ ಎಂದು ವಿಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದಲ್ಲಿ 1,000 ಶಿಶುಗಳ ಪೈಕಿ 24 ಶಿಶುಗಳ ಮರಣವಾಗುತ್ತಿದೆ. ಆದರೆ ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಈ ಸಂಖ್ಯೆ 12ರ ಒಳಗಿದೆ, ಅಪೌಷ್ಟಿಕತೆಯೇ ಸಾವಿನ ಸಂಖ್ಯೆ ಹೆಚ್ಚಾಗಲು ಮುಖ್ಯ ಕಾರಣ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ಅತಿ ಹೆಚ್ಚು ನವಜಾತ ಶಿಶುಗಳು ಸಾವನ್ನಪ್ಪುತ್ತಿರುವುದು ಆತಂಕಕಾರಿಯಾಗಿದ್ದು, ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದೊಂದಿಗೆ ಚರ್ಚೆ ನಡೆಸುತ್ತಿದೆ. ರಾಯಚೂರು, ಬೀದರ್, ಕಲಬುರಗಿ, ವಿಜಯನಗರ ಮತ್ತು ಬಳ್ಳಾರಿಯಲ್ಲಿ ತಾಯಂದಿರು ಮತ್ತು ಶಿಶುಗಳು ಅಪೌಷ್ಟಿಕತೆಯನ್ನು ಎದುರಿಸುತ್ತಿದ್ದು, ಇದು ಗಂಭೀರ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

ಗರ್ಭಾವಸ್ಥೆಯಲ್ಲಿನ ಅಪೌಷ್ಟಿಕತೆಯ ಸಮಸ್ಯೆಯನ್ನು ಪರಿಹರಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ. ಅವರಿಗೆ ಹೆಚ್ಚಿನ ಕಾಳಜಿ ಅಗತ್ಯವಿದೆ, ಬಳ್ಳಾರಿಯಲ್ಲಿನ ಐಎಂಆರ್ (ಶಿಶು ಮರಣ ಪ್ರಮಾಣ) ಕುರಿತ ವರದಿ ಆಘಾತಕಾರಿಯಾಗಿದೆ. ನಾನು ವೈದ್ಯನಲ್ಲ ಮತ್ತು ಸಾವಿಗೆ ತಾಂತ್ರಿಕ ಕಾರಣಗಳು ನನಗೆ ತಿಳಿದಿಲ್ಲ. ಆದರೆ ಇಡೀ ರಾಜ್ಯಕ್ಕೆ ಒಂದೇ ರೀತಿಯ ಪೌಷ್ಟಿಕಾಂಶ ಕಿಟ್‌ಗಳು ಸಿಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ಸಭೆಯನ್ನು ಶೀಘ್ರದಲ್ಲೇ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT