ಪೋರ್ಚುಗೀಸ್ ಕಾಲದ ರಸ್ತೆ 
ರಾಜ್ಯ

ಬೆಳಗಾವಿ: ಪೋರ್ಚುಗೀಸ್ ಕಾಲದ ರಸ್ತೆ ಅಭಿವೃದ್ಧಿಪಡಿಸಲು ಗೋವಾ ಅಸ್ತು, ಹರ್ಷ ವ್ಯಕ್ತಪಡಿಸಿದ ಸ್ಥಳೀಯರು

ಹಲವು ವರ್ಷಗಳಿಂದ ಸಂಚಾರ ಸ್ಥಗಿತಗೊಂಡಿದ್ದ ಪೋರ್ಚುಗೀಸ್ ಕಾಲದ ರಸ್ತೆಯನ್ನು ಅಭಿವೃದ್ಧಿಪಡಿಸಲು ಗೋವಾ ಸರ್ಕಾರ ಹಸಿರು ನಿಶಾನೆ ತೋರಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪರ್ವಾಡ, ಕಣಕುಂಬಿ...

ಬೆಳಗಾವಿ: ಹಲವು ವರ್ಷಗಳಿಂದ ಸಂಚಾರ ಸ್ಥಗಿತಗೊಂಡಿದ್ದ ಪೋರ್ಚುಗೀಸ್ ಕಾಲದ ರಸ್ತೆಯನ್ನು ಅಭಿವೃದ್ಧಿಪಡಿಸಲು ಗೋವಾ ಸರ್ಕಾರ ಹಸಿರು ನಿಶಾನೆ ತೋರಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪರ್ವಾಡ, ಕಣಕುಂಬಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ರಸ್ತೆಯು ಗೋವಾದ ಸತ್ರೆಯಿಂದ ಕರ್ನಾಟಕದ ಪರ್ವಾಡ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತದೆ. ಗೋವಾ ಸರ್ಕಾರದ ಈ ನಿರ್ಧಾರವು ಪರ್ವಾಡ ಗ್ರಾಮಸ್ಥರು ಒಂದು ಗಂಟೆಯೊಳಗೆ ಕಾಲ್ನಡಿಗೆಯಲ್ಲಿ ಗೋವಾ ಗಡಿಯನ್ನು ತಲುಪಲು ಸಹಾಯ ಮಾಡುತ್ತದೆ ಮತ್ತು ಅವರ ಸಮಯ ಹಾಗೂ ಹಣವನ್ನು ಉಳಿಸುತ್ತದೆ.

ಪರ್ವಾಡ್ ಮತ್ತು ಸತ್ರೆ ನಡುವೆ ಮಹದಾಯಿ ನದಿಗೆ ಪೋರ್ಚುಗೀಸ್ ರಸ್ತೆ ಮತ್ತು ಸೇತುವೆಯ ಅಭಿವೃದ್ಧಿಗೆ ಗೋವಾ ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿತ್ತು. ಆದರೆ, ಗೋವಾ ರಾಜ್ಯ ವ್ಯಾಪ್ತಿಯಲ್ಲಿರುವ ಪುರಾತನ ರಸ್ತೆಯನ್ನು ಮಾತ್ರ ಅಭಿವೃದ್ಧಿಪಡಿಸಲಾಗುತ್ತಿದೆ. "ಈ ರಸ್ತೆಯನ್ನು ಅಭಿವೃದ್ಧಿಪಡಿಸಿದರೆ, ಪರ್ವಾಡದ ಗ್ರಾಮಸ್ಥರು 10 ರಿಂದ 12 ಕಿಮೀ ದೂರ ನಡೆದು ಗೋವಾ ಗಡಿಯನ್ನು ತಲುಪಬಹುದು" ಎಂದು ಮೂಲಗಳು ತಿಳಿಸಿವೆ.

“ಕಣಕುಂಬಿ ಮತ್ತು ಪರ್ವಾಡದ ಗ್ರಾಮಸ್ಥರು ಭತ್ತದ ಕೃಷಿಗಾಗಿ ಸತ್ರೆ ಮೂಲಕ ಗೋವಾಕ್ಕೆ ಹೋಗುತ್ತಾರೆ. ಅವರು ತಮ್ಮ ಆದಾಯದ ಮೂಲಕ್ಕಾಗಿ ಗೋವಾದ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಪುರಾತನ ಪೋರ್ಚುಗೀಸ್ ರಸ್ತೆ ಮತ್ತು ಮಹದಾಯಿ ನದಿಯ ಹಳೆಯ ಸೇತುವೆ ದಯನೀಯ ಸ್ಥಿತಿಯಲ್ಲಿದೆ, ಇದರಿಂದಾಗಿ ಗ್ರಾಮಸ್ಥರು ಅದನ್ನು ಬಳಸುತ್ತಿಲ್ಲ, ”ಎಂದು ಅವರು ಹೇಳಿದ್ದಾರೆ.

ಪೋರ್ಚುಗೀಸ್ ರಸ್ತೆಯನ್ನು ಅಭಿವೃದ್ಧಿಪಡಿಸಲು ಸತ್ರೆ ಗ್ರಾಮಸ್ಥರು ಗೋವಾ ಸರ್ಕಾರವನ್ನು ಒತ್ತಾಯಿಸಿದ್ದರು. ಈಗ ಗೋವಾ ಸರ್ಕಾರ ಅನುಮತಿ ನೀಡಿದ್ದು, ಗೋವಾದ ಗಡಿ ಪ್ರದೇಶಗಳಲ್ಲಿ ವಾಸಿಸುವ ಗ್ರಾಮಸ್ಥರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

SCROLL FOR NEXT