ಪೋರ್ಚುಗೀಸ್ ಕಾಲದ ರಸ್ತೆ 
ರಾಜ್ಯ

ಬೆಳಗಾವಿ: ಪೋರ್ಚುಗೀಸ್ ಕಾಲದ ರಸ್ತೆ ಅಭಿವೃದ್ಧಿಪಡಿಸಲು ಗೋವಾ ಅಸ್ತು, ಹರ್ಷ ವ್ಯಕ್ತಪಡಿಸಿದ ಸ್ಥಳೀಯರು

ಹಲವು ವರ್ಷಗಳಿಂದ ಸಂಚಾರ ಸ್ಥಗಿತಗೊಂಡಿದ್ದ ಪೋರ್ಚುಗೀಸ್ ಕಾಲದ ರಸ್ತೆಯನ್ನು ಅಭಿವೃದ್ಧಿಪಡಿಸಲು ಗೋವಾ ಸರ್ಕಾರ ಹಸಿರು ನಿಶಾನೆ ತೋರಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪರ್ವಾಡ, ಕಣಕುಂಬಿ...

ಬೆಳಗಾವಿ: ಹಲವು ವರ್ಷಗಳಿಂದ ಸಂಚಾರ ಸ್ಥಗಿತಗೊಂಡಿದ್ದ ಪೋರ್ಚುಗೀಸ್ ಕಾಲದ ರಸ್ತೆಯನ್ನು ಅಭಿವೃದ್ಧಿಪಡಿಸಲು ಗೋವಾ ಸರ್ಕಾರ ಹಸಿರು ನಿಶಾನೆ ತೋರಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪರ್ವಾಡ, ಕಣಕುಂಬಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ರಸ್ತೆಯು ಗೋವಾದ ಸತ್ರೆಯಿಂದ ಕರ್ನಾಟಕದ ಪರ್ವಾಡ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತದೆ. ಗೋವಾ ಸರ್ಕಾರದ ಈ ನಿರ್ಧಾರವು ಪರ್ವಾಡ ಗ್ರಾಮಸ್ಥರು ಒಂದು ಗಂಟೆಯೊಳಗೆ ಕಾಲ್ನಡಿಗೆಯಲ್ಲಿ ಗೋವಾ ಗಡಿಯನ್ನು ತಲುಪಲು ಸಹಾಯ ಮಾಡುತ್ತದೆ ಮತ್ತು ಅವರ ಸಮಯ ಹಾಗೂ ಹಣವನ್ನು ಉಳಿಸುತ್ತದೆ.

ಪರ್ವಾಡ್ ಮತ್ತು ಸತ್ರೆ ನಡುವೆ ಮಹದಾಯಿ ನದಿಗೆ ಪೋರ್ಚುಗೀಸ್ ರಸ್ತೆ ಮತ್ತು ಸೇತುವೆಯ ಅಭಿವೃದ್ಧಿಗೆ ಗೋವಾ ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿತ್ತು. ಆದರೆ, ಗೋವಾ ರಾಜ್ಯ ವ್ಯಾಪ್ತಿಯಲ್ಲಿರುವ ಪುರಾತನ ರಸ್ತೆಯನ್ನು ಮಾತ್ರ ಅಭಿವೃದ್ಧಿಪಡಿಸಲಾಗುತ್ತಿದೆ. "ಈ ರಸ್ತೆಯನ್ನು ಅಭಿವೃದ್ಧಿಪಡಿಸಿದರೆ, ಪರ್ವಾಡದ ಗ್ರಾಮಸ್ಥರು 10 ರಿಂದ 12 ಕಿಮೀ ದೂರ ನಡೆದು ಗೋವಾ ಗಡಿಯನ್ನು ತಲುಪಬಹುದು" ಎಂದು ಮೂಲಗಳು ತಿಳಿಸಿವೆ.

“ಕಣಕುಂಬಿ ಮತ್ತು ಪರ್ವಾಡದ ಗ್ರಾಮಸ್ಥರು ಭತ್ತದ ಕೃಷಿಗಾಗಿ ಸತ್ರೆ ಮೂಲಕ ಗೋವಾಕ್ಕೆ ಹೋಗುತ್ತಾರೆ. ಅವರು ತಮ್ಮ ಆದಾಯದ ಮೂಲಕ್ಕಾಗಿ ಗೋವಾದ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಪುರಾತನ ಪೋರ್ಚುಗೀಸ್ ರಸ್ತೆ ಮತ್ತು ಮಹದಾಯಿ ನದಿಯ ಹಳೆಯ ಸೇತುವೆ ದಯನೀಯ ಸ್ಥಿತಿಯಲ್ಲಿದೆ, ಇದರಿಂದಾಗಿ ಗ್ರಾಮಸ್ಥರು ಅದನ್ನು ಬಳಸುತ್ತಿಲ್ಲ, ”ಎಂದು ಅವರು ಹೇಳಿದ್ದಾರೆ.

ಪೋರ್ಚುಗೀಸ್ ರಸ್ತೆಯನ್ನು ಅಭಿವೃದ್ಧಿಪಡಿಸಲು ಸತ್ರೆ ಗ್ರಾಮಸ್ಥರು ಗೋವಾ ಸರ್ಕಾರವನ್ನು ಒತ್ತಾಯಿಸಿದ್ದರು. ಈಗ ಗೋವಾ ಸರ್ಕಾರ ಅನುಮತಿ ನೀಡಿದ್ದು, ಗೋವಾದ ಗಡಿ ಪ್ರದೇಶಗಳಲ್ಲಿ ವಾಸಿಸುವ ಗ್ರಾಮಸ್ಥರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT