ಗೃಹ ಸಚಿವ ಅರಗ ಜ್ಞಾನೇಂದ್ರ 
ರಾಜ್ಯ

ಅಡಿಕೆ ಬೆಳೆಗಾರರ "ಅಡಕೆ ಕೊನೆ" ತೆಗೆಯುವ ಸಮಸ್ಯೆಗೆ ಕಾರ್ಬನ್ ಫೈಬರ್ ದೋಟಿ ಪರಿಹಾರ: ಗೃಹ ಸಚಿವ ಆರಗ ಜ್ಞಾನೇಂದ್ರ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ, ಅಡಕೆ ಕೊನೆ ತೆಗೆಯುವ ಸಮಸ್ಯೆಗೆ ಕಾರ್ಬನ್ ಫೈಬರ್ ದೋಟಿ ವರವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ತೀರ್ಥಹಳ್ಳಿ: ಅಡಿಕೆ ಬೆಳೆಗಾರರು ಎದುರಿಸುತ್ತಿರುವ, ಅಡಕೆ ಕೊನೆ ತೆಗೆಯುವ ಸಮಸ್ಯೆಗೆ ಕಾರ್ಬನ್ ಫೈಬರ್ ದೋಟಿ ವರವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಕೃಷಿ ಮಲೆನಾಡು ಕೃಷಿಕರ ಸಮುದಾಯ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ, ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ ಡಿ.28 ರಂದು ಆಯೋಜಿಸಲಾಗಿದ್ದ ಕಾರ್ಬನ್ ಫೈಬರ್ ದೋಟಿಯಲ್ಲಿ ಕೊನೆ ತೆಗೆಯುವ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಬದುಕನ್ನು ಸಹನೀಯಗೊಳಿಸಲು, ಹಲವಾರು ವ್ಯಕ್ತಿಗಳು ಹಾಗೂ ಸಂಸ್ಥೆಗಳು, ಶ್ರಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ, ರೈತರು ಇತ್ತೀಚಿನ ದಿನಗಳಲ್ಲಿ ಅಡಿಕೆ ಕೊನೆ ತೆಗೆಯುವ ವಿಚಾರದಲ್ಲಿ, ಬಹಳವಾಗಿ, ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೊನೆ ತೆಗೆಯುವ ಕಾಯಕದಲ್ಲಿ ಹಲವಾರು ಕಾರ್ಮಿಕರೂ ಆಕಸ್ಮಿಕವಾಗಿ ಮೇಲಿನಿಂದ ಬಿದ್ದು ಅಮೂಲ್ಯ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಇದಕ್ಕೆಲ್ಲಾ ವರದಾನ ವೆಂಬಂತೆ, ಅತ್ಯಂತ ಹಗುರವಾದ ಹಾಗೂ ಬಹಳವಾಗಿ ಉಪಯೋಗವಾಗುವ ಹಾಗೂ ನೆರವಾಗುವ ಕಾರ್ಬನ್ ಧೋಟಿ ಯ ಆವಿಷ್ಕಾರ ಆಗಿದೆ ಎಂದರು. ಇದಕ್ಕಾಗಿ ಶ್ರಮಿಸಿದ, ಯುವ ಸಂಶೋಧನಾಕಾರರಿಗೆ ಅಭಿನಂದನೆಗಳು.

ಸಾಮಾನ್ಯ ರೈತರೂ ಈ ವಿನೂತನ ದೋಟಿಯನ್ನು ಪಡೆದುಕೊಳ್ಳಲು ಅನುಕೂಲವಾಗುವಂತೆ, ಕೃಷಿ ಹಾಗೂ ತೋಟಗಾರಿಕೆ ಇಲಾಖಯಿಂದ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ವ್ಯವಸ್ಥೆ, ಮಾಡಲಾಗುವುದು ಎಂದೂ ಸಚಿವರು ತಿಳಿಸಿದರು.

ಅಡಕೆಯಿಂದ ಹತ್ತು ಹಲವು ಇತರ ಉತ್ಪನ್ನಗಳು ಹೊರ ಬರುತ್ತಿವೆ, ಇದೊಂದು ಅತ್ಯಂತ ಸಂತೋಷದಾಯಕ ವಿಚಾರವಾಗಿದೆ, ಎಂದು ಆರಗ ಜ್ಞಾನೇಂದ್ರ ತಿಳಿಸಿದರು. ಕೂಳೂರು ರಾವ್, ಸಾಹಿತಿ, ಛಾಯಾ ಚಿತ್ರಗ್ರಾಹಕ ಶ್ರೀಪಡ್ರೆ, ಡಾ. ರವಿಕುಮಾರ್ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT