ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣ: ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಕೇಸ್ ರದ್ದತಿಗೆ 'ಹೈ' ನಕಾರ

ನಗರದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಪ್ರಕರಣ ರದ್ದತಿಗೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ನಿರಾಕರಿಸಿದೆ.

ಬೆಂಗಳೂರು: ನಗರದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಪ್ರಕರಣ ರದ್ದತಿಗೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ನಿರಾಕರಿಸಿದೆ.

ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಕೇಸ್ ರದ್ದತಿಗೆ ನಕಾರ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತರೆಂದು ಹೇಳಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪ ಈ ಹಿಂದೆ ಕೇಳಿಬಂದಿತ್ತು. ಅಬ್ದುಲ್‌ನಾಸಿರ್ ಮದನಿ ವಿರುದ್ಧ ಸಾಕ್ಷ್ಯ ಹೇಳದಂತೆ ಬೆದರಿಕೆ ಹೇರಲಾಗಿತ್ತು.

ಕೆ.ಕೆ.ಶಹೀನಾ, ಸುಬೇರ್ ಪಡುಪು, ಉಮ್ಮರ್ ಮೌಲ್ವಿ ಬೆದರಿಕೆ ಹಾಕಿದ್ದರು. ಸಾಕ್ಷಿಗಳ ಸಂದರ್ಶನ ನೆಪದಲ್ಲಿ ಬೆದರಿಕೆ ಆರೋಪ ಹಾಕಲಾಗಿತ್ತು.

ಈ ಸಂಬಂಧ ಕೊಡಗಿನ ಯೋಗಾನಂದ್, ರಫೀಕ್ ಅವರು ಎರಡು ಪ್ರತ್ಯೇಕ ದೂರು ದಾಖಲಿಸಿದ್ದ‌ರು. ಇದರಂತೆ ಪ್ರಕರಣದಿಂದ ಕೈಬಿಡುವಂತೆ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌

JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್‌ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿಕೆ ಶಿವಕುಮಾರ್‌ ವ್ಯಂಗ್ಯ