ಸಂಗ್ರಹ ಚಿತ್ರ 
ರಾಜ್ಯ

ಬಿಲ್ ಪಾವತಿ ಕುರಿತು ಮಾತಿನ ಚಕಮಕಿ: ಡಾಬಾಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಸಿಬ್ಬಂದಿ ಸಾವು

ಊಟ ಮಾಡಿದ ಬಿಲ್‌ ಪಾವತಿಸಿ ಎಂದು ಕೇಳಿದ್ದಕ್ಕೆ ಡಾಬಾಗೆ ಪೆಟ್ರೋಲ್‌ ಸುರಿದು ಬೆಂಕಿ ಹೆಚ್ಚಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಡಾಬಾ ಸಿಬ್ಬಂದಿಯೋರ್ವ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಬೆಂಗಳೂರು: ಊಟ ಮಾಡಿದ ಬಿಲ್‌ ಪಾವತಿಸಿ ಎಂದು ಕೇಳಿದ್ದಕ್ಕೆ ಡಾಬಾಗೆ ಪೆಟ್ರೋಲ್‌ ಸುರಿದು ಬೆಂಕಿ ಹೆಚ್ಚಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಡಾಬಾ ಸಿಬ್ಬಂದಿಯೋರ್ವ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಹಾಸನ ಮೂಲದ ದೊಡ್ಡ ಬ್ಯಾಲೆಕೆರೆಯಲ್ಲಿ ನೆಲೆಸಿದ್ದ ಮನೋಜ್‌ (29) ಮೃತ ವ್ಯಕ್ತಿ. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಸೋಲದೇವನಹಳ್ಳಿ ಪೊಲೀಸರು, ದುಷ್ಕರ್ಮಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಹೆಸರಘಟ್ಟ ಮುಖ್ಯರಸ್ತೆ ಸಮೀಪದ ನೆಲಮಂಗಲ ಹೆದ್ದಾರಿಯ ಯು-ಟರ್ನ್ ಡಾಬಾದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.

ರಾತ್ರಿ 10 ಗಂಟೆ ಸುಮಾರಿಗೆ ಡಾಬಾಗೆ ಬಂದಿರುವ ದುಷ್ಕರ್ಮಿಗಳ ಗುಂಪೊಂದು ಊಟ ಮಾಡಿದೆ. ಬಳಿಕ ಮದ್ಯಪಾನವನ್ನೂ ಮಾಡಿದ್ದಾರೆ. ಊಟ ಮಾಡಿ ಹಲವು ಗಂಟೆಗಳಾದರೂ ಸ್ಥಳವನ್ನು ತೊರೆದಿರಲಿಲ್ಲ. ಬಾಗಿಲು ಮುಚ್ಚುವ ಸಮಯವಾಗಿದೆ ಎಂದು ಹೇಳದರೂ ಸ್ಥಳದಿಂದ ತೆರಳಿಲ್ಲ. ಅಲ್ಲದೆ, ಊಟದ ಬಿಲ್ ಕಟ್ಟಲು ನಿರಾಕರಿಸಿದ್ದಾರೆ. ಬಿಲ್ ಪಾವತಿಸಿ, ಸ್ಥಳ ತೊರೆಯುವಂತೆ ಡಾಬಾ ಸಿಬ್ಬಂದಿಗಳು ತಿಳಿಸಿದಾಗ ಕೋಪಗೊಂಡ ದುಷ್ಕರ್ಮಿಗಳು ಬೈಕ್ ನಲ್ಲಿ ಪೆಟ್ರೋಲ್ ತುಂಬಿ ಇರಿಸಿಕೊಂಡಿದ್ದ ಬಾಟಲಿಗಳನ್ನು ತಂಡು ಡಾಬಾ ಮೇಲೆ ಸುರಿದು ಬೆಂಕಿ ಹಚ್ಚಿದ್ದಾರೆ. ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸ್ಥಳದಲ್ಲಿದ್ದ ಮನೋಜ್ ಗೂ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ಮನೋಜ್ ಕೂಗಾಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದಿರುವ ತೇಜಸ್ ಹಾಗೂ ಇತರೆ ಸಿಬ್ಬಂದಿ ಮನೋಜ್ ನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸದ್ದಾರೆ. ಬಳಿಕ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸಂತ್ರಸ್ತ ವ್ಯಕ್ತಿ ನೀಡಿದ ಹೇಳಿಕೆ ಆಧರಿಸಿ ಪೊಲೀಸರು ಆರೋಪಿಗಳ ವಿರುದ್ಧ ಸೆಕ್ಷನ್ 436 (ಮನೆಯನ್ನು ನಾಶಪಡಿಸುವ ಉದ್ದೇಶದಿಂದ ಬೆಂಕಿ ಅಥವಾ ಸ್ಫೋಟಕ ವಸ್ತು ಬಳಕೆ) ಮತ್ತು 307 (ಕೊಲೆಯ ಪ್ರಯತ್ನ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮನೋಜ್ ಸಾವಿನ ಬಳಿಕ ಪೊಲೀಸರು ದುಷ್ಕರ್ಮಿಗಳ ವಿರುದ್ಧವೂ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT