ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಸೋಂಕು ಹೆಚ್ಚುತ್ತಿದ್ದರೂ ಪರೀಕ್ಷೆಗಳ ಸಂಖ್ಯೆ ಇಳಿಕೆ, ಹೆಚ್ಚಿದ ಆತಂಕ

ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಸೋಂಕು ಹೆಚ್ಚಾಗುತ್ತಿದ್ದರೂ, ಪರೀಕ್ಷೆಗಳ ಸಂಖ್ಯೆ ಹೆಚ್ಚಳಗೊಳ್ಳದೆ ಇಳಿಕೆಯಾಗಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಸೋಂಕು ಹೆಚ್ಚಾಗುತ್ತಿದ್ದರೂ, ಪರೀಕ್ಷೆಗಳ ಸಂಖ್ಯೆ ಹೆಚ್ಚಳಗೊಳ್ಳದೆ ಇಳಿಕೆಯಾಗಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ.

ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ, ದೈನಂದಿನ ಕೋವಿಡ್ -19 ಪರೀಕ್ಷಾ ಸಂಖ್ಯೆಗಳು ಕೇವಲ ಮೂರು ಬಾರಿ ಮಾತ್ರ 1 ಲಕ್ಷದ ಗಡಿ ದಾಟಿರುವುದು ಕಂಡು ಬಂದಿದೆ.

ಡಿಸೆಂಬರ್ 27 ರಂದು ರಾಜ್ಯದಲ್ಲಿ 58,495 ರಷ್ಟಿದ್ದ ಪರೀಕ್ಷೆಗಳ ಸಂಖ್ಯೆ, ಮರುದಿನ ಅದು 69,993ಕ್ಕೆ ಏರಿಕೆಯಾಗಿತ್ತು. ಈ ಸಮಯದಲ್ಲಿ ರಾಜ್ಯದಲ್ಲಿ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 200-400 ರಷ್ಟಿತ್ತು.

ಡಿಸೆಂಬರ್ 24 ರಂದು 1,14,559 ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ ಸಂದರ್ಭದಲ್ಲಿ ರಾಜ್ಯದಲ್ಲಿ ಸೋಂಕಿತರ ಪ್ರಕರಣಗಳ ಸಂಖ್ಯೆ 405ಕ್ಕೆ ತಲುಪಿತ್ತು. ಸಾಂಕ್ರಾಮಿಕ ರೋಗದ ಆರಂಭದಿಂದ ಇಲ್ಲಿಯವರೆಗೂ ರಾಜ್ಯದಲ್ಲಿ 5,61,26,868 ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಮಂಗಳವಾರ 356 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30,05,232 ಕ್ಕೆ ತಲುಪಿದೆ.

ಈ ನಡುವೆ ರಾಜ್ಯದಲ್ಲಿ ನಿನ್ನೆ 2 ಸಾವುಗಳು ಸಂಭವಿಸಿದ್ದು, ಮಹಾಮಾರಿ ವೈರಸ್ ಈ ವರೆಗೂ ಒಟ್ಟು 38,318 ಮಂದಿಯನ್ನು ಬಲಿ ಪಡೆದುಕೊಂಡಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ 269 ಪ್ರಕರಣಗಳು ವರದಿಯಾಗಿದ್ದು, ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,61,997 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ 7,456 ಸಕ್ರಿಯ ಪ್ರಕರಣಗಳಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 6,122 ರಷ್ಟಿದೆ.

ರಾಜ್ಯದಲ್ಲಿ ಹೆಚ್ಚು ಸಕ್ರಿಯ ಪ್ರಕರಣಗಳು ಹೊಂದಿರುವ ಇತರೆ ಜಿಲ್ಲೆಗಳ ಪೈಕಿ ಕೊಡಗಿನಲ್ಲಿ 221 ಪ್ರಕರಣಗಳು, ದಕ್ಷಿಣ ಕನ್ನಡ 123 ಪ್ರಕರಣಗಳು, 103 ಪ್ರಕರಣಗಳೊಂದಿಗೆ ಮೈಸೂರು, 102 ಪ್ರಕರಣಗಳೊಂದಿಗೆ ಬಳ್ಳಾರಿ ಮತ್ತು 100 ಪ್ರಕರಣಗಳೊಂದಿಗೆ ಉತ್ತರ ಕನ್ನಡ ಸೇರಿವೆ.

ಕೋವಿಡ್ ವಾರ್ ರೂಮ್ ಪ್ರಕಾರ, ಶಿರಸಿ, ದಾಂಡೇಲಿ, ಉಡುಪಿ, ಹುಬ್ಬಳ್ಳಿ-ಧಾರವಾಡ, ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪ್ರದೇಶಗಳು, ಬೆಳಗಾವಿ, ತುಮಕೂರು, ಮೈಸೂರು ಮತ್ತು ಮಂಗಳೂರು ನಗರ ಪ್ರದೇಶಗಳು ಹೆಚ್ಚು ಸೋಂಕು ಪೀಡಿತ ಪ್ರದೇಶಗಳಾಗಿವೆ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT