ಸಿಟಿ ರವಿ 
ರಾಜ್ಯ

ನೈಟ್ ಕರ್ಫ್ಯೂ: ಸರ್ಕಾರದ ನಿರ್ಧಾರಕ್ಕೆ ಸಿಟಿ ರವಿ ಅಸಮಾಧಾನ

ಕೊರೋನಾ  ರೂಪಾಂತರಿ ವೈರಸ್ ಓಮಿಕ್ರಾನ್ ಭೀತಿಯಿಂದಾಗಿ ರಾಜ್ಯದಲ್ಲಿ ಡಿ.28ರಿಂದ 10ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಸರ್ಕಾರ ದಿಢೀರ್ ನಿರ್ಧಾರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ.ರವಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕೊರೋನಾ  ರೂಪಾಂತರಿ ವೈರಸ್ ಓಮಿಕ್ರಾನ್ ಭೀತಿಯಿಂದಾಗಿ ರಾಜ್ಯದಲ್ಲಿ ಡಿ.28 ರಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಸರ್ಕಾರ ದಿಢೀರ್ ನಿರ್ಧಾರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ.ರವಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸರ್ಕಾರದ ನೈಟ್ ಕರ್ಫ್ಯೂ ಆದೇಶದ ಬಗ್ಗೆ ವ್ಯಾಖ್ಯಾನಿಸಲಾಗಲ್ಲ. ಸರಿ, ತಪ್ಪು ಎಂದು ನಾನು ವ್ಯಾಖ್ಯಾನ ಮಾಡುವುದಕ್ಕೆ ಆಗಲ್ಲ. ಓಮಿಕ್ರಾನ್​ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಿದ್ದಲ್ಲ. ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರ ಜನರನ್ನ ಅನಗತ್ಯ ಭಯಕ್ಕೆ ಒಳಪಡಿಸಬಾರದು. ಸದ್ಯ ಜನಜೀವನ ಸಹಜ ಸ್ಥಿತಿಯಲ್ಲಿದೆ, ಆದರೆ ಎಚ್ಚರವಹಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಮಂಗಳವಾರದಿಂದ ನೈಟ್ ಕರ್ಫ್ಯೂ ಜಾರಿಗೊಂಡಿದ್ದು, ಸುಮಾರು 10 ದಿನಗಳ ಕಾಲ ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಸರ್ಕಾರದ ಈ ನಿರ್ಣಯ ಕುರಿತು ಇದೀಗ ರಾಜ್ಯದಲ್ಲಿ ಪರ-ವಿರೋಧದ ಚರ್ಚೆಗಳು ಆರಂಭಗೊಂಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!