ಎಡಿಜಿಪಿ ಭಾಸ್ಕರ್ ರಾವ್ 
ರಾಜ್ಯ

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆ

ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಅನುಮೋದಿಸಿದ್ದು, ಡಿಸೆಂಬರ್ 31 ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಅನುಮೋದಿಸಿದ್ದು, ಡಿಸೆಂಬರ್ 31 ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಸ್ವತಃ ಭಾಸ್ಕರ್ ರಾವ್ ಅವರೇ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ್ದು, ತಮ್ಮ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿರುವ ಭಾಸ್ಕರ್ ರಾವ್ ಅವರು ಮುಂಬರುವ ದಿನಗಳಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆಂದು ಕೆಲ ಸುದ್ದಿಗಳು ಪ್ರಕಟಗೊಂಡಿದ್ದವು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾಸ್ಕರ್ ರಾವ್ ಅವರು, ಟ್ರಾವೆಲ್ ಮಾಡಲು ಬಯಸಿದ್ದೇನೆ. ನನ್ನ ಕುಟುಂಬಸ್ಥರೊಂದಿಗೆ ಸಮಯ ಕಳೆಯುವುದು, ಪಾಠ ಹೇಳಿಕೊಡುವುದರೊಂದಿಗೆ ಕಾಲ ಕಳೆಯಲು ಬಯಸಿದ್ದೇನೆಂದು ಹೇಳಿದ್ದಾರೆ.

1954ರಂದು ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು. ಪ್ರಸ್ತುತ ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಎಡಿಜಿಪಿ ಸಂಜಯ್ ಸಹಾಯ್ ಅವರೂ ಸ್ವಯಂ ನಿವೃತ್ತಿ ಪಡೆದಿದ್ದರು.

ರಾವ್  ಅವರು ಈ ವರ್ಷದ ಸೆಪ್ಟೆಂಬರ್‌ನಲ್ಲಿ ಸೇವೆಯಿಂದ ಸ್ವಯಂ ನಿವೃತ್ತಿಗೆ (VRS) ಅರ್ಜಿ ಸಲ್ಲಿಸಿದ್ದರು. ಕೂಡಲೇ ಅನುಮೋದನೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು. ಅವರ ಕಡತ ಮುಖ್ಯಮಂತ್ರಿ ಬಳಿ ಬಾಕಿ ಉಳಿದಿದ್ದು, ಇತ್ತೀಚೆಗಷ್ಟೇ ಅವರು ಸಹಿ ಹಾಕಿದ್ದಾರೆಂದು ತಿಳಿದುಬಂದಿದೆ.

ರಾವ್ ಅವರ ನಿವೃತ್ತಿಯೊಂದಿಗೆ, ಎಡಿಜಿಪಿ ಶ್ರೇಣಿಯ ಎರಡನೇ ಹುದ್ದೆ ರಾಜ್ಯದಲ್ಲಿ ಖಾಲಿ ಬೀಳಲಿದೆ. ಎಡಿಜಿ, ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣದ ಹುದ್ದೆ ಖಾಲಿ ಇದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಯೂ ಎಡಿಜಿಪಿ ಶ್ರೇಣಿಯದ್ದಾಗಿದೆ.

ಎಡಿಜಿಪಿ ಆಗಲಿರುವ 3 ಅಧಿಕಾರಿಗಳು!
1990 ಐಪಿಎಸ್ ಬ್ಯಾಚ್‌ನ ಈಗಿನ ಕಮಿಷನರ್ ಕಮಲ್ ಪಂತ್, ಆಗಿನ ಡಿಜಿಪಿ, ಪಿಕೆ ಗಾರ್ಗ್ ಅವರ ನಿವೃತ್ತಿಯ ನಂತರ ಈ ವರ್ಷದ ಏಪ್ರಿಲ್‌ನಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿ (DGP) ಬಡ್ತಿ ಪಡೆದರು. ಪೊಲೀಸ್ ಮಹಾನಿರೀಕ್ಷಕ (IGP) ಶ್ರೇಣಿಯ ಮೂವರು ಅಧಿಕಾರಿಗಳು — ಎಸ್ ಮುರುಗನ್, ಹೆಚ್ಚುವರಿ ಪೊಲೀಸ್ ಕಮಿಷನರ್ (ಪೂರ್ವ), ಕೆ.ವಿ.ಶರತ್ಚಂದ್ರ, ಅಪರಾಧ ತನಿಖಾ ಇಲಾಖೆ (ಸಿಐಡಿ), ಮತ್ತು ಎಂ.ನಂಜುಂಡಸ್ವಾಮಿ, ಕಾರಾಗೃಹ ಇಲಾಖೆಯಲ್ಲಿದ್ದಾರೆ – ಡಿಸೆಂಬರ್ 31 ರಂದು ಎಡಿಜಿಪಿಗಳಾಗಿ ಬಡ್ತಿ ನೀಡಲು ನಿರ್ಧರಿಸಲಾಗಿದೆ.

ಉಪ ಪೊಲೀಸ್ ಮಹಾನಿರೀಕ್ಷಕ (ಡಿಐಜಿಪಿ) ಶ್ರೇಣಿಯ ನಾಲ್ವರು ಅಧಿಕಾರಿಗಳು - ಜಂಟಿ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್, ಹುಬ್ಬಳ್ಳಿ- ಧಾರವಾಡ ಆಯುಕ್ತ ಲಾಭು ರಾಮ್, ಆಯುಕ್ತರು, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ, ಪಿಎಸ್ ಹರ್ಷ ಮತ್ತು ಎಂಡಿ, ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) , ವಿಕಾಶ್ ಕುಮಾರ್ ವಿಕಾಶ್ Dbjg ಐಜಿಪಿ ಹುದ್ದೆಗೆ ಬಡ್ತಿ ಪಡೆಯುವುದು ಬಾಕಿಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT