ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ದೈವಸ್ಥಾನ ಸೇರಿ 18 ಪೂಜಾ ಸ್ಥಳಗಳ ಅಪವಿತ್ರ ಪ್ರಕರಣ, 62 ವರ್ಷದ ವ್ಯಕ್ತಿಯ ಬಂಧನ!

ದೈವಸ್ಥಾನಗಳು ಮತ್ತು ವಿವಿಧ ಧರ್ಮಗಳ 18 ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 62 ವರ್ಷದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ದೈವಸ್ಥಾನಗಳು ಮತ್ತು ವಿವಿಧ ಧರ್ಮಗಳ 18 ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 62 ವರ್ಷದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಕೋಟೆಕಾರು ಕೊಂಡಾಣ ನಿವಾಸಿ ದೇವದಾಸ್ ದೇಸಾಯಿಯನ್ನು ಬುಧವಾರ ಬಂಧಿಸಲಾಗಿದೆ. ಆರೋಪಿ ಮೂಲತಃ ಹುಬ್ಬಳ್ಳಿ ಮೂಲದ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಆರೋಪಿ ತಂದೆ ಜಾನ್ ದೇಸಾಯಿ, ಸರ್ಕಾರಿ ಉದ್ಯೋಗಿಯಾಗಿದ್ದು,  ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಮತ್ತು ದೇವದಾಸ್ ಕೂಡ ಅದೇ ಧರ್ಮವನ್ನು ಅನುಸರಿಸುತ್ತಿದ್ದರು ಮತ್ತು ಅವರು ಮನೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದರು. ದೈವಸ್ಥಾನಗಳು, ಸಿಖ್ ಗುರುದ್ವಾರ ಮತ್ತು ಉಳ್ಳಾಲದ ಮಸೀದಿಯಲ್ಲಿ ಆಕ್ಷೇಪಾರ್ಹ ವಸ್ತುಗಳನ್ನು ಎಸೆದ ಅಪರಾಧವನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಕಮಿಷನರ್ ತಿಳಿಸಿದ್ದಾರೆ.

ಆರೋಪಿ ದೇವದಾಸ್ 1997ರಲ್ಲಿ ಉದ್ಯೋಗ ಅರಸಿ ಮಂಗಳೂರಿಗೆ ಬಂದಿದ್ದು,  ಬಂದರ್‌ ಸಾರಿಗೆ ಕಚೇರಿಯಲ್ಲಿ ಚಾಲಕನಾಗಿ ಕೆಲಸಕ್ಕೆ ಸೇರಿದ್ದ. ಕೌಟುಂಬಿಕ ಸಮಸ್ಯೆಯಿಂದ ಪತ್ನಿ ಹಾಗೂ ಮಗಳು ಅವರನ್ನು ತೊರೆದಿದ್ದು, 2006 ರಲ್ಲಿ ತಲಪಾಡಿ ಕೆಸಿ ರೋಡ್‌ನಲ್ಲಿ ಮನೆ ಖರೀದಿಸಿ ಅಲ್ಲಿಯೇ ವಾಸಿಸುತ್ತಿದ್ದಾಗಿ ಕಮಿಷನರ್  ಶಶಿಕುಮಾರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel