ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ದೈವಸ್ಥಾನ ಸೇರಿ 18 ಪೂಜಾ ಸ್ಥಳಗಳ ಅಪವಿತ್ರ ಪ್ರಕರಣ, 62 ವರ್ಷದ ವ್ಯಕ್ತಿಯ ಬಂಧನ!

ದೈವಸ್ಥಾನಗಳು ಮತ್ತು ವಿವಿಧ ಧರ್ಮಗಳ 18 ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 62 ವರ್ಷದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ದೈವಸ್ಥಾನಗಳು ಮತ್ತು ವಿವಿಧ ಧರ್ಮಗಳ 18 ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 62 ವರ್ಷದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಕೋಟೆಕಾರು ಕೊಂಡಾಣ ನಿವಾಸಿ ದೇವದಾಸ್ ದೇಸಾಯಿಯನ್ನು ಬುಧವಾರ ಬಂಧಿಸಲಾಗಿದೆ. ಆರೋಪಿ ಮೂಲತಃ ಹುಬ್ಬಳ್ಳಿ ಮೂಲದ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಆರೋಪಿ ತಂದೆ ಜಾನ್ ದೇಸಾಯಿ, ಸರ್ಕಾರಿ ಉದ್ಯೋಗಿಯಾಗಿದ್ದು,  ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಮತ್ತು ದೇವದಾಸ್ ಕೂಡ ಅದೇ ಧರ್ಮವನ್ನು ಅನುಸರಿಸುತ್ತಿದ್ದರು ಮತ್ತು ಅವರು ಮನೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದರು. ದೈವಸ್ಥಾನಗಳು, ಸಿಖ್ ಗುರುದ್ವಾರ ಮತ್ತು ಉಳ್ಳಾಲದ ಮಸೀದಿಯಲ್ಲಿ ಆಕ್ಷೇಪಾರ್ಹ ವಸ್ತುಗಳನ್ನು ಎಸೆದ ಅಪರಾಧವನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಕಮಿಷನರ್ ತಿಳಿಸಿದ್ದಾರೆ.

ಆರೋಪಿ ದೇವದಾಸ್ 1997ರಲ್ಲಿ ಉದ್ಯೋಗ ಅರಸಿ ಮಂಗಳೂರಿಗೆ ಬಂದಿದ್ದು,  ಬಂದರ್‌ ಸಾರಿಗೆ ಕಚೇರಿಯಲ್ಲಿ ಚಾಲಕನಾಗಿ ಕೆಲಸಕ್ಕೆ ಸೇರಿದ್ದ. ಕೌಟುಂಬಿಕ ಸಮಸ್ಯೆಯಿಂದ ಪತ್ನಿ ಹಾಗೂ ಮಗಳು ಅವರನ್ನು ತೊರೆದಿದ್ದು, 2006 ರಲ್ಲಿ ತಲಪಾಡಿ ಕೆಸಿ ರೋಡ್‌ನಲ್ಲಿ ಮನೆ ಖರೀದಿಸಿ ಅಲ್ಲಿಯೇ ವಾಸಿಸುತ್ತಿದ್ದಾಗಿ ಕಮಿಷನರ್  ಶಶಿಕುಮಾರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT