ರಥಕ್ಕೆ ಬೆಂಕಿ ಹೊತ್ತಿಕೊಂಡಿರುವುದು 
ರಾಜ್ಯ

ಬೆಳಗಾವಿ: ಜಾತ್ರೆಯಲ್ಲಿ ಪಟಾಕಿ ಸಿಡಿದು ರಥಕ್ಕೆ ಬೆಂಕಿ, ತಪ್ಪಿದ ಅನಾಹುತ

ಜಾತ್ರೆಯಲ್ಲಿ ಪಟಾಕಿ ಸಿಡಿದು ರಥಕ್ಕೆ ಬೆಂಕಿ ತಗುಲಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಬೆಳಗಾವಿ: ಜಾತ್ರೆಯಲ್ಲಿ ಪಟಾಕಿ ಸಿಡಿದು ರಥಕ್ಕೆ ಬೆಂಕಿ ತಗುಲಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ನಿನ್ನೆ (ಮಂಗಳವಾರ) ಶಿವಪೇಟೆ ಗ್ರಾಮದ ಜಡಿಶಂಕರಲಿಂಗ ದೇವರ ಜಾತ್ರೆ ಹಮ್ಮಿಕೊಳ್ಳಲಾಗಿತ್ತು. ಜಾತ್ರೆಯ ಪ್ರಯುಕ್ತ ಜಡಿ ಶಂಕರಲಿಂಗ ದೇವರ 38ನೇ ಮಹಾರಥೋತ್ಸವವಿತ್ತು.

ಈ ವೇಳೆ ಕೆಲ ಭಕ್ತರು ಪಟಾಕಿ ಸಿಡಿಸಿದ್ದು, ಪಟಾಕಿ ಕಿಡಿ ರಥಕ್ಕೆ ತಗುಲಿದೆ. ರಥಕ್ಕೆ ಬೆಂಕಿ ತಗುಲುತ್ತಿದ್ದಂತೆಯೇ ಎಚ್ಚೆತ್ತ ಗ್ರಾಮಸ್ಥರು ಕೂಡಲೇ ಬೆಂಕಿ ನಂದಿಸಿದ್ದಾರೆ.

ಬೆಂಕಿ ನಂದಿಸಿದ್ದರಿಂದಾಗಿ ಸ್ಥಳದಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಆದರೆ, ರಥಕ್ಕೆ ಬೆಂಕಿ ಹೊತ್ತಿಕೊಂಡಿದ್ದರ ಕುರಿತು ಭಕ್ತರಿಂದ ಬೇರೆ ಬೇರೆ ರೀತಿಯ ಮಾತುಗಳು ಕೇಳಿ ಬರುತ್ತಿವೆ. ರಥಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಅಪಶಕುನ ಎಂದು ಕೆಲವರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT