ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕೆಲಸ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಭೆ: ನಾಳೆ ಬಂದ್ ಹಿಂಪಡೆಯುವಂತೆ ಮನವಿ

ಪ್ರತ್ಯೇಕವಾಗಿ ಸಿಇಒ (ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು) ಮತ್ತು ಡಿಸಿ (ಜಿಲ್ಲಾಧಿಕಾರಿಗಳ) ಸಭೆಯನ್ನು ನಡೆಸುತ್ತಿದ್ದೇನೆ. ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕುರಿತು ಇಂದು ಸಿಇಒಗಳ ವ್ಯಾಪ್ತಿಯಲ್ಲಿ ಬರುವ ವಿಷಯಗಳನ್ನು ಚರ್ಚೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಪ್ರತ್ಯೇಕವಾಗಿ ಸಿಇಒ (ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು) ಮತ್ತು ಡಿಸಿ (ಜಿಲ್ಲಾಧಿಕಾರಿಗಳ) ಸಭೆಯನ್ನು ನಡೆಸುತ್ತಿದ್ದೇನೆ. ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕುರಿತು ಇಂದು ಸಿಇಒಗಳ ವ್ಯಾಪ್ತಿಯಲ್ಲಿ ಬರುವ ವಿಷಯಗಳನ್ನು ಚರ್ಚೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರತ್ಯೇಕವಾಗಿ ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕುರಿತು ಚರ್ಚೆ ಮಾಡಬೇಕೆಂಬ ವಿಮರ್ಶೆ ನಡೆಯುತ್ತಿದೆ. ಯಾವ್ಯಾವ ಯೋಜನೆಗಳಲ್ಲಿ ಎಷ್ಟು ಸಾಧನೆಯಾಗಿದೆ, ಆಗಿಲ್ಲ ಎಂಬ ಬಗ್ಗೆ ಪರಾಮರ್ಶೆ ಮಾಡಿಕೊಂಡು ಬರಬೇಕೆಂದು ನಾವು ಸಿಇಒಗಳಿಗೆ ಸೂಚನೆ ನೀಡಿದ್ದೇವೆ. ಎಲ್ಲವೂ ಮಾದರಿಯನ್ನು ನೀಡಲಾಗಿದ್ದು, ನಿಖರತೆ ಆಧಾರದ ಮೇಲೆ ಸಾಮಾನ್ಯ ವಿಮರ್ಶೆ ನಡೆಯಲಿದೆ ಎಂದರು.

ನಾಳೆ ಡಿಸಿ ಸಭೆ: ನಾಳೆ ಜಿಲ್ಲಾಧಿಕಾರಿಗಳ ಸಭೆ ಇರಲಿದ್ದು, ಹಲವಾರು ಆಡಳಿತ ಮತ್ತು ಅಬಿವೃದ್ಧಿ ವಿಚಾರಗಳ ವಿವರವಾದ ಪರಾಮರ್ಶೆ ನಡೆಸಲಿದ್ದೇವೆ. ನನ್ನ ದೃಷ್ಟಿಯಲ್ಲಿ ಈ ವರ್ಷ ಕೊನೆಯ ಘಟ್ಟ ಬಹಳ ಮುಖ್ಯವಾದದ್ದು. ಇದುವರೆಗೆ ಮಾಡಿರುವ ಕೆಲಸಗಳು, ಮುಂದೆ ಆದ್ಯತೆ ಮೇರೆಗೆ ಮಾರ್ಚ್ ವರೆಗೆ ಮಾಡಬೇಕಾಗಿರುವ ಕೆಲಸಗಳು, ಕಾರ್ಯಗತವಾಗಬೇಕಿರುವ ಯೋಜನೆಗಳಿಗೆ ಪರಾಮರ್ಶೆ ನಡೆಸಿ ಪ್ರಮುಖ ನಿರ್ಣಯ ತೆಗೆದುಕೊಳ್ಳಲು ಅನುಕೂಲವಾಗುತ್ತದೆ ಎಂದರು.

ಬಂದ್ ನಿಂದ ಹಿಂದೆ ಸರಿಯಲು ಮನವಿ: ಬೆಳಗಾವಿ ಗಡಿ ತಂಟೆ ವಿಚಾರದಲ್ಲಿ ಎಂಇಎಸ್ ಬಗ್ಗೆ ತೆಗೆದುಕೊಳ್ಳಬೇಕಾಗಿರುವ ತೀರ್ಮಾನವನ್ನು ನಾವು ಆದಷ್ಟು ಶೀಘ್ರದಲ್ಲಿಯೇ ತೆಗೆದುಕೊಳ್ಳುತ್ತೇವೆ. ರಾಜ್ಯದ ಜನತೆ ಹಿತದೃಷ್ಟಿಯಿಂದ, ಜನಸಾಮಾನ್ಯರ ಹಿತದಿಂದ ನಾಳೆ ಕನ್ನಡಪರ ಸಂಘಟನೆಗಳು ನಡೆಸಲುದ್ದೇಶಿಸಿರುವ ಬಂದ್ ನಿಂದ ಹಿಂದೆ ಸರಿಯಿರಿ ಎಂದು ವಾಟಾಳ್ ನಾಗರಾಜ್ ಅವರನ್ನು ಮನವಿ ಮಾಡಿಕೊಳ್ಳುತ್ತೇನೆ ಎಂದು ಸಿಎಂ ಮನವಿ ಮಾಡಿಕೊಂಡರು.

ಕನ್ನಡ ವಿರೋಧಿ ನಿಲುವುಗಳಿಗೆ ಸರ್ಕಾರ ಈಗಾಗಲೇ ಕೆಲವು ಕಠಿಣ ನಿಲುವುಗಳನ್ನು ತೆಗೆದುಕೊಂಡಿದೆ. ಮುಂದಿನ ದಿನಗಳಲ್ಲಿ ಕೂಡ ಕನ್ನಡಿಗರು, ಕನ್ನಡದ ಪರವಾಗಿ ಸರ್ಕಾರವಿರುತ್ತದೆ, ಆದುದರಿಂದ ಜನರ ಆರ್ಥಿಕ ಹಿತದೃಷ್ಟಿಯಿಂದ ಬಂದ್ ನಿಂದ ಹಿಂದೆ ಸರಿಯಬೇಕೆಂದು ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT