ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಒತ್ತಾಯಿಸಿ ಅನಂತಕುಮಾರ್ ಪುತ್ರಿ ಟ್ವೀಟ್; ಚರ್ಚೆಗೆ ಗ್ರಾಸ

ಬೆಂಗಳೂರು ಮತ್ತು ಮುಂಬೈ ನಡುವೆ ಹೈಸ್ಪೀಡ್ ರೈಲು ಓಡಿಸುವಂತೆ ಮಾಜಿ ಕೇಂದ್ರ ಸಚಿವ ದಿ. ಅನಂತ್ ಕುಮಾರ್ ಅವರ ಪುತ್ರಿ ವಿಜೇತಾ ಅನಂತಕುಮಾರ್ ಅವರು ರೈಲ್ವೆ ಸಚಿವರಿಗೆ ಮನವಿ ಮಾಡಿದ್ದು, ಆನ್‌ಲೈನ್‌ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವೆ ಹೈಸ್ಪೀಡ್ ರೈಲು ಓಡಿಸುವಂತೆ ಮಾಜಿ ಕೇಂದ್ರ ಸಚಿವ ದಿ. ಅನಂತ್ ಕುಮಾರ್ ಅವರ ಪುತ್ರಿ ವಿಜೇತಾ ಅನಂತಕುಮಾರ್ ಅವರು ರೈಲ್ವೆ ಸಚಿವರಿಗೆ ಮನವಿ ಮಾಡಿದ್ದು, ಆನ್‌ಲೈನ್‌ನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಅಸ್ತಿತ್ವದಲ್ಲಿರುವ ರೈಲನ್ನು ವೇಗಗೊಳಿಸಿ, ಈಗ ತೆಗೆದುಕೊಳ್ಳುತ್ತಿರುವ ಸಮಯವನ್ನು ಕಡಿಮೆ ಮಾಡಬಹುದು. ಆದರೆ ಈ ಮಾರ್ಗದಲ್ಲಿ ನಿರ್ದಿಷ್ಟ ಹೈ-ಸ್ಪೀಡ್ ರೈಲಿನ ಯಾವುದೇ ಪ್ರಸ್ತಾಪ ಇಲ್ಲ ಎಂದು ನೈಋತ್ಯ ರೈಲ್ವೆ(SWR) ಹೇಳಿದೆ.

ಪರಿಸರವಾದಿ ವಿಜೇತಾ ಅವರು ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲಿನ ಟ್ವೀಟ್ ಮಾಡಿದ್ದು, “ಮುಂಬೈ-ದೆಹಲಿ ನಡುವಿನ 1377 ಕಿಮೀ ದೂರ ಕ್ರಮಿಸಲು ವೇಗದ ರೈಲು ಸುಮಾರು 17 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಮುಂಬೈ-ಬೆಂಗಳೂರು ನಡುವಿನ 1120 ಕಿಮೀ ದೂರ  ಕ್ರಮಿಸಲು ವೇಗದ ರೈಲು ಸುಮಾರು 24 ಗಂಟೆಗಳನ್ನು ತೆಗೆದುಕೊಳ್ಳುತ್ತದೆ.ಅಶ್ವಿನಿ ವೈಷ್ಣವ್ ಅವರೇ ನಮಗೆ ಈ ಎರಡು ಮೆಗಾ ಸಿಟಿಗಳ ನಡುವೆ ಹೈಸ್ಪೀಡ್ ರೈಲು ಬೇಕು ಎಂದು ಹೇಳಿದ್ದಾರೆ.

ಕೆಲವರು ವಿಜೇತಾ ಅನಂತಕುಮಾರ್ ಅವರ ಸಲಹೆಯನ್ನು ಬೆಂಬಲಿಸಿ ಆನ್‌ಲೈನ್‌ನಲ್ಲಿ ಚರ್ಚೆ ಪ್ರಾರಂಭಿಸಿದರೆ, ಇನ್ನೂ ಕೆಲವರು ಮೂಲಸೌಕರ್ಯಗಳ ಕೊರತೆಯನ್ನು ವಿವರಿಸಿದ್ದಾರೆ. 

“ಖಾಸಗಿ ಬಸ್ ನಿರ್ವಾಹಕರ ಲಾಬಿ ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲಿಗೆ ಅವಕಾಶ ನೀಡುತ್ತಿಲ್ಲ. ಈ ಎರಡು ನಗರಗಳ ನಡುವಿನ ವೇಗದ ರೈಲಿನ ಬೇಡಿಕೆ ದೀರ್ಘಕಾಲದಿಂದ ಬಾಕಿ ಉಳಿದಿದೆ ಎಂದು ಸಂಜಯ್ ಮೂರ್ತಿ ಟ್ವೀಟ್ ಮಾಡಿದ್ದಾರೆ.

ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ಬೆಂಗಳೂರು ಮತ್ತು ಮುಂಬೈ ನಡುವೆ ಯಾವುದೇ ಹೈಸ್ಪೀಡ್ ಕಾರಿಡಾರ್ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದ್ದು, “ಇತ್ತೀಚೆಗೆ ಒಂಬತ್ತು ಹೈಸ್ಪೀಡ್ ಕಾರಿಡಾರ್‌ಗಳ ಪ್ರಸ್ತಾವನೆಯಲ್ಲಿ ಚೆನ್ನೈನಿಂದ ಬೆಂಗಳೂರಿನ ಮೂಲಕ ಮೈಸೂರಿಗೆ ಒಂದು ಪ್ರಸ್ತಾಪವಿದೆ. ಆದಾಗ್ಯೂ, ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರಯಾಣದ ಸಮಯವನ್ನು 24 ಗಂಟೆಗಳಿಂದ ಕಡಿಮೆ ಮಾಡುವ ಅವಶ್ಯಕತೆಯಿದೆ ಮತ್ತು ಮಾರ್ಗದ ಉದ್ದಕ್ಕೂ ವಿದ್ಯುದ್ದೀಕರಣ ಮತ್ತು ಡಬಲ್ ಟ್ರಾಕ್ ಮಾಡಲು ಮಾತ್ರ ಸಾಧ್ಯ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT