ರಾಜ್ಯಪಾಲರಿಂದ ಜಾಲತಾಣ ಉದ್ಘಾಟನೆ ಕಾರ್ಯಕ್ರಮದ ಚಿತ್ರ 
ರಾಜ್ಯ

ಕರ್ನಾಟಕ ಲೋಕಾಯುಕ್ತ ನೂತನ ಜಾಲತಾಣಕ್ಕೆ ರಾಜ್ಯಪಾಲರಿಂದ ಚಾಲನೆ

ಬೆಂಗಳೂರಿನ ಲೋಕಾಯುಕ್ತ ಕೇಂದ್ರ ಕಚೇರಿಯಲ್ಲಿ ಇಂದು ಕರ್ನಾಟಕ ಲೋಕಾಯುಕ್ತ ಜಾಲತಾಣವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ತರಲು  ಮತ್ತು ಎಲ್ಲಾ ವಿಷಯಗಳಲ್ಲಿ ಸಂಬಂಧಪಟ್ಟ ದೂರುದಾರರಿಗೆ, ಪ್ರತಿವಾದಿಗಳಿಗೆ ಮತ್ತು ಸಾರ್ವಜನಿಕರಿಗೆ  ಸಕಾಲಿಕ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ  ನೂತನ ಕರ್ನಾಟಕ ಲೋಕಾಯುಕ್ತ ಜಾಲ ತಾಣಕ್ಕೆ ಚಾಲನೆ ನೀಡಲಾಗಿದ್ದು,  ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

 ಬೆಂಗಳೂರಿನ ಲೋಕಾಯುಕ್ತ ಕೇಂದ್ರ ಕಚೇರಿಯಲ್ಲಿ ಇಂದು ಕರ್ನಾಟಕ ಲೋಕಾಯುಕ್ತ ಜಾಲತಾಣ ಉದ್ಘಾಟಿಸಿ ಮಾತನಾಡಿದ ಅವರು, ವ್ಯವಸ್ಥೆಯಲ್ಲಿ ಮಾನವ ಹಸ್ತಕ್ಷೇಪವನ್ನು ಕಡಿಮೆ ಮಾಡಿ, ತಂತ್ರಜ್ಞಾನದ ಬಳಕೆಗೆ ಆದ್ಯತೆ ನೀಡುವ ಪ್ರಧಾನ ಮಂತ್ರಿಯವರ ಚಿಂತನೆಯು ಪಾರದರ್ಶಕತೆ ಮತ್ತು  ಉತ್ತಮ ಆಡಳಿತಕ್ಕೆ ದಾರಿ ಮಾಡಿಕೊಟ್ಟಿದೆ ಎಂದರು.

ಇದೇ ಚಿಂತನೆಯೊಂದಿಗೆ ಸಂಸ್ಥೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ತರಲು ಮತ್ತು  ಸಾರ್ವಜನಿಕರಿಗೆ ಸಕಾಲಿಕ ಮಾಹಿತಿಯನ್ನು ಒದಗಿಸಲು ಲೋಕಾಯುಕ್ತ ಜಾಲತಾಣ ಉನ್ನತ್ತೀಕರಿಸಲಾಗಿದೆ. ಇದರೊಂದಿಗೆ ಅನೇಕ ಕಾರ್ಯಗಳನ್ನು ಸುಗಮಗೊಳಿಸಲಾಗುವುದು ಮತ್ತು ನಾಗರಿಕರಿಗೆ ತ್ವರಿತ, ಸುಲಭ ಮತ್ತು ಅಗ್ಗದ ನ್ಯಾಯವನ್ನು ಪಡೆಯಲು ಅನುಕೂಲವಾಗುವ ಖಾತ್ರಿಯಿದೆ ಎಂದು ಹೇಳಿದರು.
 
ದೂರು ಅಥವಾ ಸ್ವಯಂ ಪ್ರೇರಣೆಯ ಆಧಾರದ ಮೇಲೆ ತನಿಖೆಗಳ ಮೂಲಕ ಸಾರ್ವಜನಿಕ ಆಡಳಿತದಲ್ಲಿ ಶುಚಿತ್ವ ಅಭಿವೃದ್ಧಿಪಡಿಸಲು ಮತ್ತು ಶುದ್ಧ ಆಡಳಿತ , ನ್ಯಾಯ ಸಮ್ಮತತೆ ಮತ್ತು ಸೂಕ್ಷ್ಮತೆಯನ್ನು ತರಲು ನಿರಂತರ ಪ್ರಯತ್ನ ಮಾಡಲು ಲೋಕಾಯುಕ್ತರಿಂದ ನಿರೀಕ್ಷಿಸಲಾಗಿದೆ ಎಂದು ರಾಜ್ಯಪಾಲರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT