ಕೋಟ ಶ್ರೀನಿವಾಸ ಪೂಜಾರಿ 
ರಾಜ್ಯ

ದೇವಾಲಯಗಳ ಸ್ವಾಯತ್ತತೆ ಪ್ರಸ್ತಾಪಕ್ಕೆ ಸ್ವಾಮೀಜಿಗಳ ಸ್ವಾಗತ, ಭಕ್ತರೆಂದರೆ ಬರೀ ಆರ್‌ಎಸ್‌ಎಸ್ ಅಲ್ಲ ಎಂದ ಮುಜರಾಯಿ ಸಚಿವ

ಭಕ್ತರೆಂದರೆ ಬರೀ ಆರ್‌ಎಸ್‌ಎಸ್ ಅಷ್ಟೇ ಅಲ್ಲ, ದೇವರನ್ನು ನಂಬಿದವರೆಲ್ಲರೂ ಭಕ್ತರೇ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಪ್ರತಿಪಕ್ಷ ಕಾಂಗ್ರೆಸ್‌ ಅನ್ನು ಮಾತಿನ ಮೂಲಕ ತಿವಿದಿದ್ದಾರೆ.

ಬೆಂಗಳೂರು: ಭಕ್ತರೆಂದರೆ ಬರೀ ಆರ್‌ಎಸ್‌ಎಸ್ ಅಷ್ಟೇ ಅಲ್ಲ, ದೇವರನ್ನು ನಂಬಿದವರೆಲ್ಲರೂ ಭಕ್ತರೇ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಪ್ರತಿಪಕ್ಷ ಕಾಂಗ್ರೆಸ್‌ ಅನ್ನು ಮಾತಿನ ಮೂಲಕ ತಿವಿದಿದ್ದಾರೆ.

ಬಿಜೆಪಿ, ಆರ್ ಎಸ್.ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಸ್ಥಾನಗಳನ್ನು ಹಸ್ತಾಂತರಿಸುವ ಅಜೆಂಡಾ ಹೊಂದಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ಅವರು ಈ ರೀತಿ ತಿರುಗೇಟು ನೀಡಿದ್ದಾರೆ.

ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬುದು ನಮ್ಮ ಚಿಂತನೆ. ಭಕ್ತರು ಎಂದರೆ ಬಿಜೆಪಿ, ಆರ್ ಎಸ್.ಎಸ್ ಕಾರ್ಯಕರ್ತರೂ ಆಗಿರಬಹುದು ಅಥವಾ, ಡಿ.ಕೆ. ಶಿವಕುಮಾರ್ ಕೂಡ ಆಗಿರಬಹುದು. ಭಕ್ತರ ವ್ಯಾಪ್ತಿ ಬರೀ ಆರ್‌ಎಸ್‌ಎಸ್ ಅಷ್ಟೇ ಅಲ್ಲ, ದೇವರನ್ನು ನಂಬಿದವರೆಲ್ಲರೂ ಭಕ್ತರೇ ಆಗಿದ್ದಾರೆ. ಹೀಗಾಗಿ ರಾಜ್ಯದ ಹಿಂದೂ ದೇವಸ್ಥಾನಗಳನ್ನು ಕಾನೂನು ಹಾಗೂ ನಿಯಮಗಳಿಂದ ಸರಳೀಕರಣಗೊಳಿಸಿ ನಾವು ಭಕ್ತರಿಗೆ ಕೊಡಬೇಕು ಎಂದು ಆಲೋಚಿಸಿದ್ದೇವೆಯಾದರೂ ಇನ್ನೂ ಮಾರ್ಗಸೂಚಿ ಸಿದ್ಧಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ದೇವಾಲಯಗಳ ಸ್ವಾಯತ್ತತೆ ಪಸ್ತಾಪ ಸ್ವಾಗತಿಸಿದ ಸ್ವಾಮೀಜಿಗಳು
ಹಿಂದೂ ದೇವಾಲಯಗಳನ್ನು ಸ್ವತಂತ್ರಗೊಳಿಸಿ ದೇವಾಲಯದ ವರಮಾನವನ್ನು ದೇವಾಲಯಗಳ ಅಭಿವೃದ್ಧಿಗೇ ಮೀಸಲಿಡುವ ರಾಜ್ಯ ಸರ್ಕಾರದ ಪ್ರಸ್ತಾವದ ಪರ, ವಿರೋಧದ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸರ್ಕಾರದ ಈ ಪ್ರಸ್ತಾವವನ್ನು ಕಡಗಂಚಿಯ ವೀರಭದ್ರ ಶಿವಾಚಾರ್ಯ‌ ಸ್ವಾಮೀಜಿ ಸ್ವಾಗತಿಸಿದ್ದಾರೆ.

ಇದರೊಂದಿಗೆ ಸರ್ಕಾರದ ಅಭಿಪ್ರಾಯಕ್ಕೆ ವಿವಿಧ ಮಠಾಧೀಶರು ಸಹ ಬೆಂಬಲಿಸಿದ್ದು, ಪ್ರಾಚೀನ ಕಾಲದಿಂದ ಬಂದಿರುವ ನಮ್ಮ ಹಿಂದೂ ದೇವಾಲಯಗಳು ಸರ್ಕಾರದ ಅಧೀನದಲ್ಲಿ ಇರುವುದರಿಂದ ಅದರ ಅಭಿವೃದ್ಧಿ ಆಗುತ್ತಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿಂತನಶೀಲರಾಗಿ ಹಿಂದೂಗಳಿಗೆ ಸಮ್ಮತವಾದ ನಿರ್ಣಯವನ್ನು ತೆಗೆದುಕೊಂಡಿರುವುದು ಸ್ವಾಗತಾರ್ಹವಾಗಿದೆ. ಸರ್ಕಾರ ಒಳ್ಳೆಯ ಕೆಲಸಗಳನ್ನು ಮಾಡುತ್ತಿದೆ ಎಂದು ಸರಡಗಿಯ ಡಾ.ರೇವಣಸಿದ್ಧ ಶಿವಾಚಾರ್ಯರು, ಶಖಾಪುರ ತಪೋವನ ಮಠದ ಡಾ . ಸಿದ್ಧರಾಮ ಶಿವಾಚಾರ್ಯರು , ಪಾಳಾದ ಡಾ. ಗುರುಮೂರ್ತಿ ಶಿವಾಚಾರ್ಯರು ಸೇರಿದಂತೆ ಮತ್ತಿತರರು ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT