ಸಂಗ್ರಹ ಚಿತ್ರ 
ರಾಜ್ಯ

ಹೊಸ ವರ್ಷಾಚರಣೆ ಮೇಲೆ 'ಓಮಿಕ್ರಾನ್' ಕರಿನೆರಳು: ಇಂದು ಸಂಜೆ 6 ರಿಂದ ನಾಳೆ ಮುಂಜಾನೆ 5 ರವರೆಗೆ ನಗರದಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಜಾರಿ

ಕೊರೋನಾ ವೈರಸ್ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಕಡಿವಾಣ ಹಾಕಲು ಮುಂದಾಗಿದೆ. ಇದರಂತೆ ಡಿಸೆಂಬರ್ 31ರ ಸಂಜೆ 6ರಿಂದ ಮುಂಜಾನೆ 5ರವರೆಗೆ...

ಬೆಂಗಳೂರು: ಕೊರೋನಾ ವೈರಸ್ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಕಡಿವಾಣ ಹಾಕಲು ಮುಂದಾಗಿದೆ. ಇದರಂತೆ ಡಿಸೆಂಬರ್ 31ರ ಸಂಜೆ 6ರಿಂದ ಮುಂಜಾನೆ 5ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಐದು ಅಥವಾ 5ಕ್ಕಿಂತ ಹೆಚ್ಚು ಜನ ಸೇರಿ ಹೊಸ ವರ್ಷದ ಯಾವುದೇ ರೀತಿಯ ಸಂಭ್ರಮಾಚರಣೆ ಮಾಡದಂತೆ ನಿಷೇಧ ಹೇರಿದೆ.

ಈ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಆದೇಶ ಹೊರಡಿಸಿದ್ದು, ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಅನ್ವಯವಾಗುವಂತೆ ನಗರದ ಸಾರ್ವಜನಿಕ ಸ್ಥಳಗಳು, ಪಾರ್ಕ್ ಮೈದಾನ ಸೇರಿದಂತೆ ಇದರೆ ಸಾರ್ವಜನಿಕ ಜಾಗಗಳಲ್ಲಿ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.

ಮನೆಗಳು, ವಸತಿ ಸಂಕೀರ್ಣಗಳು, ಖಾಸಗಿ ಕ್ಲಬ್ ಗಳಲ್ಲಿ ಸಾರ್ವಜನಿಕರು ಅಥವಾ ಸದಸ್ಯರು ಯಾವುದೇ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ.

ಹೋಟೆಲ್,  ಪಬ್, ಕ್ಲಬ್, ಮಾಲ್, ರೆಸ್ಟೋರಂಟ್ ಗಳಲ್ಲಿ ಯಾವುದೇ ಡಿಜೆ ಕಾರ್ಯಕ್ರಮ, ನೃತ್ಯ, ಸಂಗೀತ ಗಾಯನ, ಬ್ಯಾಂಡ್ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜನೆ ನಿಷೇಧಿಸಲಾಗಿದೆ. ಇನ್ನು ರಾತ್ರಿ 10ರವರೆಗೆ ಹೋಟೆಲ್, ಪಬ್, ಕ್ಲಬ್, ರೆಸ್ಟೋರೆಂಟ್, ಮಾಲ್ ಗಳು ಕಡ್ಡಾಯವಾಗಿ ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸರ್ಕಾರ ಸೂಚಿಸಿರುವ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಒಂದು ವೇಳೆ ಆದೇಶ ಹಾಗೂ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದೇ ಆದರೆ, ವಿಪತ್ತು ನಿರ್ವಹಣೆ ಕಾಯ್ದೆ ಹಾಗೂ ಸಾಂಕ್ರಾಮಿ ರೋಗ ಕಾಯ್ದೆ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ.

ಡಿಜೆ, ವಿಶೇಷ ಕಾರ್ಯಕ್ರಮಗಳನ್ನು ಹೊರತಾಗಿಸಿ ಮಾಲ್, ಪಬ್, ಬಾರ್ ಹಾಗೂ ರೆಸ್ಟೋರೆಂಟ್ ಗಳು ನೈಟ್ ಕರ್ಫ್ಯೂ ಆರಂಭವಾಗುವ ರಾತ್ರಿ 10 ರವರೆಗೂ ಕಾರ್ಯನಿರ್ವಹಿಸಬುದು. ನೈಟ್ ಕರ್ಫ್ಯೂ ಜಾರಿಯಾದ ಬಳಿಕ ಬಾಗಿಲು ಮುಚ್ಚಬೇಕು. ಸಿಬ್ಬಂದಿಗಳು ಹಾಗೂ ಇತರೆ ಜನರು ಮನೆಗಳಿಗೆ ತಲುಪುವ ಸಲುವಾಗಿ ರಾತ್ರಿ 10 ಗಂಟೆ ಬಳಿಕ ಕೆಲ ಹೊತ್ತಿನವರೆಗೂ ಓಡಾಟಕ್ಕೆ ಅವರಿಗೆ ಅವಕಾಶ ನೀಡಲಾಗುತ್ತದೆ. ನಂತರ ಕಠಿಣ ನಿರ್ಬಂಧಗಳನ್ನು ಹೇರಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT