ಸಂಗ್ರಹ ಚಿತ್ರ 
ರಾಜ್ಯ

ಕೃಷಿ ಚಟುವಟಿಕೆಗಳಿಗೆ ಜಾನುವಾರು ಸಾಗಿಸುವವರ ಮೇಲೆ ಕ್ರಮವಿಲ್ಲ; ಹೈಕೋರ್ಟ್'ಗೆ ಸರ್ಕಾರ

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಸುಗ್ರೀವಾಜ್ಞೆ-2020ರ ನಿಮಯ ಅಂತಿಮಗೊಳಿಸಿ ಜಾರಿಗೆ ತರುವ ತನಕ ರಾಜ್ಯದಲ್ಲಿ ಜಾನುವಾರುಗಳನ್ನು ಸಾಗಣೆ ಮಾಡುವವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸುವುದಿಲ್ಲ ಎಂದು ಹೈಕೋರ್ಟ್'ಗೆ ಸರ್ಕಾರ ಭರವಸೆ ನೀಡಿದೆ. 

ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಸುಗ್ರೀವಾಜ್ಞೆ-2020ರ ನಿಮಯ ಅಂತಿಮಗೊಳಿಸಿ ಜಾರಿಗೆ ತರುವ ತನಕ ರಾಜ್ಯದಲ್ಲಿ ಜಾನುವಾರುಗಳನ್ನು ಸಾಗಣೆ ಮಾಡುವವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸುವುದಿಲ್ಲ ಎಂದು ಹೈಕೋರ್ಟ್'ಗೆ ಸರ್ಕಾರ ಭರವಸೆ ನೀಡಿದೆ. 

ಸುಗ್ರೀವಾಜ್ಞೆ ರದ್ದುಪಡಿಸಲು ಕೋರಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ಎಡ್ವೊಕೇಟ್ ಜನರಲ್ ಈ ಭರವಸೆ ನೀಡಿದರು. 

ಈ ಸಮಸ್ಯೆ ಪರಿಹರಿಸುವ ಕುರಿತು ಸ್ಪಷ್ಟನೆ ನೀಡಬೇಕೆಂದು ಹೈಕೋರ್ಟ್ ಸರ್ಕಾರಕ್ಕೆ ಜನ.18 ರಂದು ಸೂಚನೆ ನೀಡಿತ್ತು. 

ವಿಚಾರಣೆ ವೇಳೆ ಸೆಕ್ಷನ್ 5ರ ಪ್ರಕಾರ ಜಾನುವಾರುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸುವುದಕ್ಕೆ ನಿರ್ಬಂಧಗಳಿವೆ. ಇದು ರೈತರು ತಮ್ಮ ಜಾನುವಾರುಗಳನ್ನು ಕೃಷಿ ಕೆಲಸಗಳಿಗೆ, ಹೈನುಗಾರಿಕೆಗೆ ಸಾಗಿಸುವುದಕ್ಕೂ ಅಡ್ಡಿಯಾಗಿದೆ ಎಂದಿತು. 

ಇದಕ್ಕೆ ಸರ್ಕಾರದ ಪರವಾಗಿ ಉತ್ತರಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಅವರು, ಕಾಯ್ದೆಗೆ ನಿಯಮಗಳನ್ನು ರೂಪಿಸುವವರೆಗೆ ಸೆಕ್ಷನ್ 5ರ ಅಡಿಯಲ್ಲಿ ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT