ಸಾಂದರ್ಭಿಕ ಚಿತ್ರ 
ರಾಜ್ಯ

ಬಾಡಿಗೆ ಪಡೆದ ಮನೆಯಲ್ಲೇ ದರೋಡೆ: ಸಹೋದರರ ಬಂಧನ

ಮನೆ ಬಾಡಿಗೆ ಪಡೆದ ಮಾಲೀಕರ​ ಮನೆಯಲ್ಲೇ ದರೋಡೆ ಮಾಡಿದ್ದ ಸಹೋದರರನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಅರವಿಂದ್​ ಹಾಗೂ ಅವಿನಾಶ್​ ಬಂಧಿತ ಆರೋಪಿಗಳು

ಬೆಂಗಳೂರು: ಮನೆ ಬಾಡಿಗೆ ಪಡೆದ ಮಾಲೀಕರ​ ಮನೆಯಲ್ಲೇ ದರೋಡೆ ಮಾಡಿದ್ದ ಸಹೋದರರನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಅರವಿಂದ್​ ಹಾಗೂ ಅವಿನಾಶ್​ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 123.77 ಗ್ರಾಂ ಚಿನ್ನಾಭರಣ,3 ಕೆ.ಜಿ ಬೆಳ್ಳಿ ಆಭರಣ ಹಾಗೂ 40 ಸಾವಿರ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅವಿನಾಶ್​ ಮತ್ತು ಅರವಿಂದ್​ ಎಂಬ ಅಣ್ಣ-ತಮ್ಮರಿಬ್ಬರು ತಮ್ಮದೇ ಪುಟ್ಟದಾದ ಬಟ್ಟೆ ವ್ಯಾಪಾರ ನಡೆಸುತ್ತಿದ್ದರು. ಆದರೆ, ಕೋವಿಡ್​​ ಲಾಕ್ ಡೌನ್ ನಿಂದ ಅವರ ವ್ಯಾಪಾರ ಕುಗ್ಗಿತು. ಹೀಗಾಗಿ ಅವರು ಮನೆ ಬಾಡಿಗೆ ಕಟ್ಟುವ ಸ್ಥಿತಿಯಲ್ಲಿಯೂ ಇರಲಿಲ್ಲ. 

ಇದೇ ಸಮಯದಲ್ಲಿ ಮನೆ ಮಾಲೀಕ ಸುಭಾಷ್ ಚಂದ್ರ ತಮ್ಮ ಮಗನ ಮದುವೆ ನಿಶ್ಚಯ ಮಾಡಿದ್ದರು. ಇದನ್ನು ಅರಿತ ಅರವಿಂದ್ ತನ್ನ ಸಹೋದರ ಅವಿನಾಶ್ ಜೊತೆ ಮಾತನಾಡಿ ಮನೆ ಮಾಲೀಕರ ಮನೆಯಲ್ಲಿಯೇ‌ ದರೋಡೆ ನಡೆಸಲು ಸಂಚು ರೂಪಿಸಿದರು. ಅದರಂತೆ ಮಾಲೀಕರ ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕು ದರೋಡೆ ನಡೆಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಮನೆ ಮಾಲೀಕರು ವಿದ್ಯಾರಣ್ಯಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಜಾಡು ಹಿಡಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT