ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಹಂತ ಹಂತವಾಗಿ ಆಫ್‌ಲೈನ್ ತರಗತಿಗಳನ್ನು ಪ್ರಾರಂಭಿಸಿ: ಖಾಸಗಿ ಶಾಲೆಗಳಿಂದ ಸರ್ಕಾರಕ್ಕೆ ಬೇಡಿಕೆ

ಹಂತ ಹಂತವಾಗಿ ಆಫ್‌ಲೈನ್ ತರಗತಿಗಳನ್ನು ಪ್ರಾರಂಭಿಸುವಂತೆ ಖಾಸಗಿ ಶಾಲೆಗಳು ಸರ್ಕಾರವನ್ನು ಒತ್ತಾಯಿಸಿದೆ,

ಬೆಂಗಳೂರು: ಹಂತ ಹಂತವಾಗಿ ಆಫ್‌ಲೈನ್ ತರಗತಿಗಳನ್ನು ಪ್ರಾರಂಭಿಸುವಂತೆ ಖಾಸಗಿ ಶಾಲೆಗಳು ಸರ್ಕಾರವನ್ನು ಒತ್ತಾಯಿಸಿದೆ,ಶಿಕ್ಷಣ ಇಲಾಖೆಯು ಆಫ್‌ಲೈನ್ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಗಣನೆಗೆ ತೆಗೆದುಕೊಳ್ಳಬೇಕು ಮತ್ತು ಕಟ್ಟುನಿಟ್ಟಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರ್ನಾಟಕದ ಖಾಸಗಿ ಶಾಲೆ ಮತ್ತು ಕಾಲೇಜುಗಳ ನಿರ್ವಹಣಾ ಸಂಘದ ಸದಸ್ಯರು ಹೇಳಿದರು.

ಕೋವಿಡ್ ಪಾಸಿಟಿವಿಟಿ ದರವು ಶೇಕಡಾ 3 ಕ್ಕಿಂತ ಕಡಿಮೆಯಾಗಿರುವುದರಿಂದ ಸರ್ಕಾರ ಶಾಲೆಗಳನ್ನು ಪ್ರಾರಂಭಿಸಬೇಕು ಎಂದು ಅದು ಹೇಳಿದೆ. ಇಲ್ಲದಿದ್ದರೆ, ಇದು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯ ಪಟ್ಟಿದೆ. "ಕಳೆದ 15 ತಿಂಗಳುಗಳಲ್ಲಿ, ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿಲ್ಲ ಶಾಲಾ ಜೀವನವನ್ನು ಮರೆತಿದ್ದಾರೆ ಮತ್ತು ವಿವಿಧ ಸಾಮಾಜಿಕ ದುಷ್ಕೃತ್ಯಕ್ಕೆ  ಗುರಿಯಾಗಿದ್ದಾರೆ" ಎಂದು ಫೆಡರೇಶನ್ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ರ ಹೇಳಿದ್ದಾರೆ. ಆಫ್‌ಲೈನ್ ತರಗತಿಗಳನ್ನು ಪುನರಾರಂಭಿಸುವ ಮೊದಲು ಪೋಷಕರು, ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಕಡ್ಡಾಯ ಲಸಿಕೆ ನೀಡಬೇಕೆಂದು ಸಹ ಅವರು ಮನವಿ ಮಾಡಿದ್ದಾರೆ.

ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಕಡ್ಡಾಯಗೊಳಿಸಲಾಗಿಲ್ಲ ಮತ್ತು ಕಾಲೇಜುಗಳನ್ನು ಪುನಃ ತೆರೆಯುವ ಮೊದಲು ಲಸಿಕೆ ಹಾಕಲು ಕನಿಷ್ಠವಿದ್ಯಾರ್ಥಿಗಳಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಮತ್ತು ಉಪಮುಖ್ಯಮಂತ್ರಿ ಡಾ.ಎನ್.ಎನ್.ಅಶ್ವತ್ಥ ನಾರಾಯಣ ಮಂಗಳವಾರ ಹೇಳಿದ್ದಾರೆ. ಆದರೆ ಲಸಿಕೆ ನೀಡಲು ಸಿದ್ಧರಿರುವ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಕಳೆದ ವರ್ಷ ಪೋಷಕರು ಮತ್ತು ಶಾಲೆಗಳು ತೊಂದರೆಗಳನ್ನು ಎದುರಿಸಿದ್ದರಿಂದ ಶುಲ್ಕ ಪಾವತಿಯ ಗೊಂದಲವನ್ನು ಕೊನೆಗೊಳಿಸಲು ಫೆಡರೇಷನ್‌ಗಳು ಸರ್ಕಾರದ ಹಸ್ತಕ್ಷೇಪ ಕೇಳಿದೆ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ಯೋಜನೆಯನ್ನು ವಿಸ್ತರಿಸಬೇಕು ಎಂದು ಅದು ಹೇಳಿದೆ. ಸರ್ಕಾರದಿಂದ ವಿಭಿನ್ನ ಹೇಳಿಕೆಗಳು ಬರುತ್ತಿರುವುದರಿಂದ ಎರಡನೇ ಪಿಯುಸಿ ಫಲಿತಾಂಶಗಳ ಬಗ್ಗೆ ವಸ್ತುನಿಷ್ಠ ನಿರ್ಧಾರವನ್ನು ಕೋರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT