ಎಸ್ ಸುರೇಶ್ ಕುಮಾರ್ 
ರಾಜ್ಯ

ಆಗಸ್ಟ್‌ 22ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಎಆರ್‌ಟಿಇಟಿ-2021) ಆಗಸ್ಟ್ 22ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಎಆರ್‌ಟಿಇಟಿ-2021) ಆಗಸ್ಟ್ 22ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 

ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ, ಉತ್ತೀರ್ಣರಾಗಿರಬೇಕು ಹಾಗೂ ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ/ಬಿ.ಎಸ್.ಸಿ.ಇಡಿ ಯಲ್ಲಿ ಉತ್ತೀರ್ಣರಾಗಿರಬೇಕು. 

ಕೊನೆ ವರ್ಷಗಳ ಡಿಇಡಿ, ಬಿಇಡಿ, ಬಿಎಇಡಿ/ಬಿಎಸ್ಸಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್-ಸೈಟ್ ಮೂಲಕ  ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದ್ದು ಜುಲೈ 20 ಕೊನೆಯ ದಿನವಾಗಿದೆ. ಆ. 22ರಂದು ಬೆಳಗ್ಗೆ 9.30ರಿಂದ 12 ಗಂಟೆ ಮತ್ತು ಮಧ್ಯಾಹ್ನ 2 ಗಂಟೆಯಿಂದ 4.30ರವರೆಗೆ ಪರೀಕ್ಷೆಗಳು ನಡೆಯಲಿವೆ. ಪತ್ರಿಕೆ 150 ಅಂಕಗಳನ್ನು ಹೊಂದಿರುತ್ತವೆ. ಪ್ರವೇಶ ಪತ್ರಗಳನ್ನು ದಿನಾಂಕ ಆ.12ರಿಂದ ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ. ಹೆಚ್ಚಿನ ಸಂಖ್ಯೆಯ ಅರ್ಹ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್