ಸಾಂದರ್ಭಿಕ ಚಿತ್ರ 
ರಾಜ್ಯ

ಕುಡಿಯುವ ನೀರು ಸಮಸ್ಯೆಯೇ?: ಈಗ ನೇರವಾಗಿ ಶಾಸಕ ಅರಗ ಜ್ಞಾನೇಂದ್ರಗೆ ದೂರು ಸಲ್ಲಿಸಿ!

ರಾಜ್ಯಾದ್ಯಂತ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇತ್ತೀಚೆಗೆ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಹತ್ತಾರು ದೂರುಗಳು ಬಂದವು. ಈ ಸಂಬಂಧ ವರದಿ ನೀಡಲು ಸದನ ಸಮಿತಿಯನ್ನು ರಚಿಸಲಾಗಿತ್ತು.

ಬೆಂಗಳೂರು: ರಾಜ್ಯಾದ್ಯಂತ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇತ್ತೀಚೆಗೆ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಹತ್ತಾರು ದೂರುಗಳು ಬಂದವು. ಈ ಸಂಬಂಧ ವರದಿ ನೀಡಲು ಸದನ ಸಮಿತಿಯನ್ನು ರಚಿಸಲಾಗಿತ್ತು.

ಶಾಸಕ ಅರಗ ಜ್ಞಾನೇಂದ್ರ ಅವರ ಅಧ್ಯಕ್ಷತೆಯಲ್ಲಿ ಸದನ ಸಮಿತಿ ನಿನ್ನೆ ಪ್ರಾಥಮಿಕ ಸಭೆ ನಡೆಸಿ ಏಪ್ರಿಲ್ ತಿಂಗಳಲ್ಲಿ ಸಭೆ ಸೇರಲು ಸಾಧ್ಯವಾಗಿರಲಿಲ್ಲ, ಹೀಗಾಗಿ ಅಂತಿಮ ವರದಿ ಸಲ್ಲಿಸಲು ಸೆಪ್ಟೆಂಬರ್ 30ವರೆಗೆ ಕಾಲಾವಕಾಶ ಕೋರಿತು.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ ಅರಗ ಜ್ಞಾನೇಂದ್ರ, ರಾಜ್ಯಾದ್ಯಂತ ಕುಡಿಯುವ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಆಯಾ ಜಿಲ್ಲಾಧಿಕಾರಿಗಳು, ಜಿಲ್ಲೆಯ ಮುಖ್ಯಸ್ಥರು, ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದು ಸಮಸ್ಯೆಗಳನ್ನು ಗಮನಕ್ಕೆ ತರುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಕೂಡ ನನ್ನ ಇಮೇಲ್ ವಿಳಾಸ araga.jnanendra@gmail.com ಗೆ ದೂರು ಸಲ್ಲಿಸಬಹುದು ಎಂದರು.

ಸದನ ಸಮಿತಿಯ ಭಾಗವಾಗಿರುವ 15 ಶಾಸಕರು ಮತ್ತು ಐದು ವಿಧಾನ ಪರಿಷತ್ ಸದಸ್ಯರು ನಿನ್ನೆ ಸಭೆ ಸೇರಿದ್ದರು. ಮತ್ತೊಂದು ಬಾಧ್ಯತಾ ಸಮಿತಿಯ ಮುಂದೆ ಮತ್ತೊಂದು ಸಭೆ ನಡೆದಿದ್ದು ಶಾಸಕರ ವಿರುದ್ಧ ಎರಡು ದೂರುಗಳನ್ನು ಸ್ವೀಕರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT