ಸಾಂದರ್ಭಿಕ ಚಿತ್ರ 
ರಾಜ್ಯ

ಕುಡಿಯುವ ನೀರು ಸಮಸ್ಯೆಯೇ?: ಈಗ ನೇರವಾಗಿ ಶಾಸಕ ಅರಗ ಜ್ಞಾನೇಂದ್ರಗೆ ದೂರು ಸಲ್ಲಿಸಿ!

ರಾಜ್ಯಾದ್ಯಂತ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇತ್ತೀಚೆಗೆ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಹತ್ತಾರು ದೂರುಗಳು ಬಂದವು. ಈ ಸಂಬಂಧ ವರದಿ ನೀಡಲು ಸದನ ಸಮಿತಿಯನ್ನು ರಚಿಸಲಾಗಿತ್ತು.

ಬೆಂಗಳೂರು: ರಾಜ್ಯಾದ್ಯಂತ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇತ್ತೀಚೆಗೆ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಹತ್ತಾರು ದೂರುಗಳು ಬಂದವು. ಈ ಸಂಬಂಧ ವರದಿ ನೀಡಲು ಸದನ ಸಮಿತಿಯನ್ನು ರಚಿಸಲಾಗಿತ್ತು.

ಶಾಸಕ ಅರಗ ಜ್ಞಾನೇಂದ್ರ ಅವರ ಅಧ್ಯಕ್ಷತೆಯಲ್ಲಿ ಸದನ ಸಮಿತಿ ನಿನ್ನೆ ಪ್ರಾಥಮಿಕ ಸಭೆ ನಡೆಸಿ ಏಪ್ರಿಲ್ ತಿಂಗಳಲ್ಲಿ ಸಭೆ ಸೇರಲು ಸಾಧ್ಯವಾಗಿರಲಿಲ್ಲ, ಹೀಗಾಗಿ ಅಂತಿಮ ವರದಿ ಸಲ್ಲಿಸಲು ಸೆಪ್ಟೆಂಬರ್ 30ವರೆಗೆ ಕಾಲಾವಕಾಶ ಕೋರಿತು.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ ಅರಗ ಜ್ಞಾನೇಂದ್ರ, ರಾಜ್ಯಾದ್ಯಂತ ಕುಡಿಯುವ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಆಯಾ ಜಿಲ್ಲಾಧಿಕಾರಿಗಳು, ಜಿಲ್ಲೆಯ ಮುಖ್ಯಸ್ಥರು, ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆದು ಸಮಸ್ಯೆಗಳನ್ನು ಗಮನಕ್ಕೆ ತರುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಕೂಡ ನನ್ನ ಇಮೇಲ್ ವಿಳಾಸ araga.jnanendra@gmail.com ಗೆ ದೂರು ಸಲ್ಲಿಸಬಹುದು ಎಂದರು.

ಸದನ ಸಮಿತಿಯ ಭಾಗವಾಗಿರುವ 15 ಶಾಸಕರು ಮತ್ತು ಐದು ವಿಧಾನ ಪರಿಷತ್ ಸದಸ್ಯರು ನಿನ್ನೆ ಸಭೆ ಸೇರಿದ್ದರು. ಮತ್ತೊಂದು ಬಾಧ್ಯತಾ ಸಮಿತಿಯ ಮುಂದೆ ಮತ್ತೊಂದು ಸಭೆ ನಡೆದಿದ್ದು ಶಾಸಕರ ವಿರುದ್ಧ ಎರಡು ದೂರುಗಳನ್ನು ಸ್ವೀಕರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT