ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಕೇಳಿಬಂದ ಭಾರೀ ಶಬ್ಧ: ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನತೆ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನ 12.30ರ ಆಸುಪಾಸಿನಲ್ಲಿ ಭಾರೀ ಶಬ್ಧವೊಂದು ಕೇಳಿ ಬಂದಿದ್ದು, ಶಬ್ಧಕ್ಕೆ ಸಿಲಿಕಾನ್ ಸಿಟಿ ಜನತೆ ಬೆಚ್ಚಿಬಿದ್ದಿದ್ದಾರೆ. 

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನ 12.30ರ ಆಸುಪಾಸಿನಲ್ಲಿ ಭಾರೀ ಶಬ್ಧವೊಂದು ಕೇಳಿ ಬಂದಿದ್ದು, ಶಬ್ಧಕ್ಕೆ ಸಿಲಿಕಾನ್ ಸಿಟಿ ಜನತೆ ಬೆಚ್ಚಿಬಿದ್ದಿದ್ದಾರೆ. 

ಬಿಡದಿ, ಬನಶಂಕರಿ, ಬ್ಯಾಟರಾಯನಪುರ, ಆರ್ ‌ಆರ್ ನಗರ, ನಾಗರಭಾವಿ, ಚಂದ್ರಾ ಲೇಔಟ್, ಮಾಗಡಿ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಕೆಲವೆಡೆ ಶಬ್ಧ ಕೇಳಿಸಿದ ಅನುಭವ ಆಗಿದೆ ಎಂದು ಹೇಳಲಾಗುತ್ತಿದೆ. 

ಈ ಭಾರೀ ಶಬ್ಧಕ್ಕೆ ಎರಡು ಸೆಕೆಂಡುಗಳ ಕಾಲ ಕಿಟಕಿ, ಬಾಗಿಲು ಅಲುಗಾಡಿದ ಅನುಭವವೂ ಆಗಿದೆ. ಈ ಬಗ್ಗೆ ಜನರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳಲಾರಂಭಿಸಿದ್ದು, ಅನೇಕ ಮಂದಿ ತಮಗೂ ಅನುಭವ ಆಗಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. 

ಕೆಲವರು ಹೇಳುವ ಪ್ರಕಾರ 12.23ರ ಸುಮಾರಿಗೆ ಸ್ಪೋಟದ ಸದ್ದು ಕೇಳಿದೆ. ಬಂಡೆ ಒಡೆದಾಗ ಬರುವ ಸದ್ದಿನಂತೆ ಕೇಳಿಸಿದ್ದು, ಈ ವೇಳೆ ಆಗಸದಲ್ಲಿ ಹಾರಾಡುತ್ತಿದ್ದ ಪಕ್ಷಿಗಳು ಆತಂಕಗೊಂಡು ಚೆಲ್ಲಾಪಿಲ್ಲಿಯಾಗಿ ಹಾರಿದ್ದು ಕಂಡಿ ಬಂದಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT