ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿನ ಸಭೆ 
ರಾಜ್ಯ

ಎಸ್‌ಸಿಎಸ್‌ಪಿ, ಟಿಎಸ್‌ಪಿ ಕ್ರಿಯಾ ಯೋಜನೆಗೆ ಅನುಮೋದನೆ: ಮುಖ್ಯಮಂತ್ರಿ ಯಡಿಯೂರಪ್ಪ

ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿಎಸ್ ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್ ಪಿ) ಅಡಿಯಲ್ಲಿ ಪ್ರಸಕ್ತ ವರ್ಷ 26,005 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಿ.ಎಸ್  ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್  ಶುಕ್ರವಾರ ಅನುಮೋದನೆ ನೀಡಿದೆ.

ಬೆಂಗಳೂರು: ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿಎಸ್ ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್ ಪಿ) ಅಡಿಯಲ್ಲಿ ಪ್ರಸಕ್ತ ವರ್ಷ 26,005 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಿ.ಎಸ್  ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್  ಶುಕ್ರವಾರ ಅನುಮೋದನೆ ನೀಡಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಅಭಿವೃದ್ಧಿ ಪರಿಷತ್  ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಪ್ರಸಕ್ತ ವರ್ಷ ಎಸ್ ಸಿಎಸ್ ಪಿ ಮತ್ತು ಟಿಎಸ್ ಪಿ ಅಡಿಯಲ್ಲಿ 26,005.01 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಎಸ್ ಸಿಎಸ್ ಪಿ ಅಡಿಯಲ್ಲಿ  18,331.54 ಕೋಟಿ ರೂ. ಮತ್ತು ಟಿಎಸ್ ಪಿ ಅಡಿಯಲ್ಲಿ 7,673.47 ಕೋಟಿ ರೂ. ವೆಚ್ಚ ಮಾಡುವ ಪ್ರಸ್ತಾವಗಳುಳ್ಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದರು.

ಎರಡೂ ಉಪ ಯೋಜನೆಗಳ ಅಡಿಯಲ್ಲಿ ಮೊದಲ ಕಂತಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹೊಸ ಕಾರ್ಯಕ್ರಮಗಳ ಅನುಷ್ಠಾನವನ್ನು ತ್ವರಿತವಾಗಿ ಆರಂಭಿಸಲಾಗುವುದು ಎಂದರು. ಕಳೆದ ಆರ್ಥಿಕ ವರ್ಷದಲ್ಲಿ ಎಸ್ ಸಿಎಸ್ ಪಿ ಮತ್ತು ಟಿಎಸ್ ಪಿ ಯೋಜನೆಯ ಯಾವುದೇ ಅನುದಾನವನ್ನು ಬಾಕಿ ಉಳಿಸಿಕೊಂಡಿಲ್ಲ ಅಥವಾ ಅನ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಿಲ್ಲ  ಎಂದು ಯಡಿಯೂರಪ್ಪ ತಿಳಿಸಿದರು.

 ಗೋವಿಂದ ಕಾರಜೋಳ ಮಾತನಾಡಿ, ಕಳೆದ ವರ್ಷ ಎಸ್ ಸಿಎಸ್ ಪಿ ಮತ್ತು ಟಿಎಸ್ ಪಿ ಅಡಿಯಲ್ಲಿ ₹ 25,945.90 ಕೋಟಿ ಅನುದಾನ ಮೀಸಲಿಡಲಾಗಿತ್ತು. ₹ 24,646.99 ಕೋಟಿ ವೆಚ್ಚ ಮಾಡಲಾಗಿದೆ. ಯಾವುದೇ ಅನುದಾನದ ವರ್ಗಾವಣೆ ಅಥವಾ ಉಳಿಕೆ ಆಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

2020-21ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಅಭಿವೃದ್ದಿಗಾಗಿ 18,131.12 ಕೋಟಿ ರೂ. ಗಳನ್ನು ಒದಗಿಸಿದ್ದು, 17,352.45 ಕೋಟಿ ರೂ.ಗಳು ವೆಚ್ಚವಾಗಿರುತ್ತದೆ. ಶೇಕಡ 96 ರಷ್ಟು ಪ್ರಗತಿಯಾಗಿದೆ. ಪರಿಶಿಷ್ಟ ಪಂಗಡದವರ ಅಭಿವೃದ್ದಿಗಾಗಿ 7814.78 ಕೋಟಿ ರೂ.ಗಳನ್ನು ಒದಗಿಸಿದ್ದು, 7294.54 ಕೋಟಿ ರೂ .ಗಳು ವೆಚ್ಚವಾಗಿರುತ್ತದೆ. ಶೇಕಡ 93 ರಷ್ಟು ಪ್ರಗತಿಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT