ರಾಜ್ಯ

ಮಂಗಳೂರು: ಗುಂಡಿಟ್ಟು ಬೀದಿ ನಾಯಿ ಹತ್ಯೆ; ದುಷ್ಕರ್ಮಿಗಾಗಿ ಶೋಧ

Manjula VN

ಮಂಗಳೂರು; ಬೀದಿ ನಾಯಿಗೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳೂರು ನಗರದ ಕದ್ರಿ ಶಿವಭಾಗ್ ಎಂಬಲ್ಲಿ ನಡೆದಿದೆ. 

ನಾಯಿಯ ಮರಣೋತ್ತರ ಪರೀಕ್ಷೆಯಲ್ಲಿ ಗುಂಡು ಪತ್ತೆಯಾಗಿದ್ದು, ಸ್ಥಳೀಯ ವ್ಯಕ್ತಿಯ ಮೇಲೆ ಸಂಶಯ ವ್ಯಕ್ತವಾಗುತ್ತಿವೆ.

ಗುಂಡೇಟು ತಿಂದ ನಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಜನರು ಶಕ್ತಿನಗರದ ಅನಿಮಲ್ ಕೇರ್ ಟ್ರಸ್ಟ್‌ಗೆ ಮಾಹಿತಿ ನೀಡಿದ್ದಾರೆ. ಆನಿಮಲ್ ಕೇರ್ ಟ್ರಸ್ಟ್‌ನ ಸದಸ್ಯರು ಸ್ಥಳಕ್ಕೆ ಬಂದ ಸಂದರ್ಭದಲ್ಲಿ ‌ಬುಲೆಟ್ ಗಾಯ ನಾಯಿಯ ಬೆನ್ನ ಹಿಂಭಾಗದಲ್ಲಿ ಕಂಡುಬಂದಿದೆ.

ಏರ್ ಗನ್ ಬಳಸಿ ನಾಯಿಯನ್ನು ಹತ್ಯೆ ಮಾಡಲಾಗಿದೆ ಎಂದು ಆನಿಮಲ್ ಕೇರ್ ಟ್ರಸ್ಟ್'ನ ಟ್ರಸ್ಟೀ ಸುಮಾ ಅವರು ಹೇಳಿದ್ದಾರೆ. 

ಆರೋಗ್ಯಯುತ ನಾಯಿಗೆ ಕ್ರಿಮಿನಲ್'ಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಘಟನೆ ಕುರಿತು ಸಿಸಿಟಿವಿ ದೃಶ್ಯಾವಳಿಗಳಿದ್ದರೆ ತನಿಖೆಗೆ ಸಹಕರಿಸಿ 9845255777 ಸಂಖ್ಯೆಗೆ ವಾಟ್ಸಾಪ್ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಘಠನೆ ಸಂಬಂಧ ಆನಿಮಲ್ ಕೇರ್ ಟ್ರಸ್ಟ್ ಮಂಗಳೂರು ಪೂರ್ವ ವಿಭಾಗದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶೀಘ್ರಗತಿಯಲ್ಲಿ ಆರೋಪಿಗಳನ್ನು ಬಂಧನಕ್ಕೊಳಪಡಿಸುವಂತೆ ಆಗ್ರಹಿಸಿದೆ.

SCROLL FOR NEXT