ರಾಜ್ಯ

ಮೈಸೂರು: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಇಂಜನಿಯರಿಂಗ್ ವಿದ್ಯಾರ್ಥಿಗಳು ಸಾವು

Raghavendra Adiga

ಮೈಸೂರು: ದಾರುಣ ಘಟನೆಯೊಂದರಲ್ಲಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ಆತನ ಮನೆಗೆ ಹೋಗಿ ಹತ್ತಿರದ ಕಾವೇರಿ ನದಿಯಲ್ಲಿ ಈಜಾಡಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತಡಿಮಲಂಗಿಯಲ್ಲಿ ಶನಿವಾರ ನಡೆದಿದೆ.

ನತದೃಷ್ಟ ವಿದ್ಯಾರ್ಥಿಗಳನ್ನು ಯಳಂದೂರು ತಾಲ್ಲೂಕಿನ ಕಿನಕಹಳ್ಳಿ ಗ್ರಾಮದ ಅಭಿಷೇಕ್‍(21), ಲೋಕೇಶ್(21) ಎಂದು ಗುರುತಿಸಲಾಗಿದೆ. ಇವರು ಚಾಮರಾಜನಗರದ ಸರ್ಕಾರಿ ಇಂಜಿನಿಯರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.

ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸುವುದರ ಮೂಲಕ ವಿದ್ಯಾರ್ಥಿಗಳ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ.

ತಲಕಾಡು ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

SCROLL FOR NEXT