ಸಂಗ್ರಹ ಚಿತ್ರ 
ರಾಜ್ಯ

ಕಾಸರಗೋಡು: ಸಮುದ್ರದಲ್ಲಿ ಮಗುಚಿಬಿದ್ದ ದೋಣಿ; ಮೂವರು ಮೀನುಗಾರರು ನಾಪತ್ತೆ

ಮೀನುಗಾರಿಕಾ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಭಾನುವಾರ ಮುಂಜಾನೆ ನಡೆದಿರುವುದು ವರದಿಯಾಗಿದೆ. 

ಕಾಸರಗೋಡು: ಮೀನುಗಾರಿಕಾ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಭಾನುವಾರ ಮುಂಜಾನೆ ನಡೆದಿರುವುದು ವರದಿಯಾಗಿದೆ. 

ದೋಣಿಯಲ್ಲಿ 7 ಮಂದಿ ಮೀನುಗಾರರು ಇದ್ದರೆನ್ನಲಾಗಿದ್ದು. ನಾಲ್ವರು ಈಜಿ ದಡ ಸೇರಿದ್ದಾರೆ. ಸದ್ಯ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಕಸಬಾ ಕಡಪ್ಪುರದ  ಸಂದೀಪ್(33), ರತೀಶ್(30) ಮತ್ತು ಕಾರ್ತಿಕ್ (29) ಎಂಬುವವರು ನಾಪತ್ತೆಯಾಗಿದ್ದಾರೆಂದು ವರದಿಗಳು ತಿಳಿಸಿವೆ. 

ಘಟನೆಯಲ್ಲಿ ರವಿ(40) , ಶಿಬಿನ್(30) ಹಾಗೂ ಮಣಿಕುಟ್ಟನ್(35) ಎಂಬವರು ಈಜಿ ದಡ ಸೇರಿದ್ದಾರೆ. ಅಸ್ವಸ್ಥಗೊಂಡಿರುವ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಮುದ್ರದ ದೈತ್ಯ ಅಲೆಗಳ ರಭಸಕ್ಕೆ ಫೈಬರ್ ದೋಣಿ ಮಗುಚಿ ಬಿದ್ದು ಈ ಅನಾಹುತ ಸಂಭವಿಸಿದೆ. ಸಮುದ್ರಕ್ಕೆ ಬಿದ್ದು ನಾಪತ್ತೆಯಾದವರಿಗಾಗಿ ಕರಾವಳಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ಮೀನುಗಾರರು ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಡವರಿಗೆ 5 ಲಕ್ಷ ಉಚಿತ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

‘ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ’: ಹಿಂದು-ಮುಸ್ಲಿಂ ಒಗ್ಗಟ್ಟಿಗೆ ಅಠಾವಳೆ ಕರೆ, ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ವಿರೋಧ..!

'ಟ್ರೋಲ್ ಕಟೆಂಟ್ ಆಗಿ ಬಳಕೆ'..!; ‘ಗರ್ಬಾ, ನವರಾತ್ರಿ ಎಲ್ಲರ ಹಬ್ಬ.. ಮುಸ್ಲಿಮರಿಗೆ ಆಕ್ಷೇಪವೇಕೆ?': Amruta Fadnavis ಸಮರ್ಥನೆ, Video

ಬರದನಾಡು ಚಿತ್ರದುರ್ಗಕ್ಕೆ ಐತಿಹಾಸಿಕ ಕ್ಷಣ; ಗೊನೂರು ಕೆರೆ ತಲುಪಿದ ಭದ್ರಾ ಮೇಲ್ದಂಡೆ ಯೋಜನೆಯ ನೀರು, Video

ರೇಣುಕಾಸ್ವಾಮಿ ಪ್ರಕರಣದ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ; ಫಾರ್ಮ್‌ಹೌಸ್ ಪಕ್ಷಿ ವಿವಾದದಲ್ಲಿ ಕೋರ್ಟ್‌ನಿಂದ ಸಮನ್ಸ್ ಜಾರಿ