ಸಂಗ್ರಹ ಚಿತ್ರ 
ರಾಜ್ಯ

ಕಾಸರಗೋಡು: ಸಮುದ್ರದಲ್ಲಿ ಮಗುಚಿಬಿದ್ದ ದೋಣಿ; ಮೂವರು ಮೀನುಗಾರರು ನಾಪತ್ತೆ

ಮೀನುಗಾರಿಕಾ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಭಾನುವಾರ ಮುಂಜಾನೆ ನಡೆದಿರುವುದು ವರದಿಯಾಗಿದೆ. 

ಕಾಸರಗೋಡು: ಮೀನುಗಾರಿಕಾ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಭಾನುವಾರ ಮುಂಜಾನೆ ನಡೆದಿರುವುದು ವರದಿಯಾಗಿದೆ. 

ದೋಣಿಯಲ್ಲಿ 7 ಮಂದಿ ಮೀನುಗಾರರು ಇದ್ದರೆನ್ನಲಾಗಿದ್ದು. ನಾಲ್ವರು ಈಜಿ ದಡ ಸೇರಿದ್ದಾರೆ. ಸದ್ಯ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಕಸಬಾ ಕಡಪ್ಪುರದ  ಸಂದೀಪ್(33), ರತೀಶ್(30) ಮತ್ತು ಕಾರ್ತಿಕ್ (29) ಎಂಬುವವರು ನಾಪತ್ತೆಯಾಗಿದ್ದಾರೆಂದು ವರದಿಗಳು ತಿಳಿಸಿವೆ. 

ಘಟನೆಯಲ್ಲಿ ರವಿ(40) , ಶಿಬಿನ್(30) ಹಾಗೂ ಮಣಿಕುಟ್ಟನ್(35) ಎಂಬವರು ಈಜಿ ದಡ ಸೇರಿದ್ದಾರೆ. ಅಸ್ವಸ್ಥಗೊಂಡಿರುವ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಮುದ್ರದ ದೈತ್ಯ ಅಲೆಗಳ ರಭಸಕ್ಕೆ ಫೈಬರ್ ದೋಣಿ ಮಗುಚಿ ಬಿದ್ದು ಈ ಅನಾಹುತ ಸಂಭವಿಸಿದೆ. ಸಮುದ್ರಕ್ಕೆ ಬಿದ್ದು ನಾಪತ್ತೆಯಾದವರಿಗಾಗಿ ಕರಾವಳಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ಮೀನುಗಾರರು ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT