ಸಿಎಂ ಯಡಿಯೂರಪ್ಪ 
ರಾಜ್ಯ

ರಾಜ್ಯದ 114 ಅತ್ಯಂತ ಹಿಂದುಳಿದ ತಾಲ್ಲೂಕುಗಳ ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಕಾನ್ಸಂಟ್ರೇಟರ್ ಪೂರೈಕೆ: ಸಿಎಂ ಯಡಿಯೂರಪ್ಪ

ರಾಜ್ಯದ 114 ಅತ್ಯಂತ ಹಿಂದುಳಿದ ತಾಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ 791 ಆಮ್ಲಜನಕ ಕಾನ್ಸಂಟ್ರೇಟರ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ರಾಜ್ಯದ 114 ಅತ್ಯಂತ ಹಿಂದುಳಿದ ತಾಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ 791 ಆಮ್ಲಜನಕ ಕಾನ್ಸಂಟ್ರೇಟರ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದ 114 ಅತ್ಯಂತ ಹಿಂದುಳಿದ ತಾಲ್ಲೂಕುಗಳಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಕಾನ್ಸಂಟ್ರೇಟರ್ ಗಳನ್ನು ವಿತರಿಸುವ ಗಿವ್‌ಇಂಡಿಯಾ ಫೌಂಡೇಶನ್‌ನ ಕಾರ್ಯಕ್ಕೆ ಚಾಲನೆ ನೀಡುವಾಗ ಮುಖ್ಯಮಂತ್ರಿ, "ಸಾಂಕ್ರಾಮಿಕ ರೋಗದ ಮೂರನೇ ಅಲೆಯನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, 114 ಅತ್ಯಂತ ಹಿಂದುಳಿದ ತಾಲ್ಲೂಕುಗಳು 791 ಆಮ್ಲಜನಕ ಕಾನ್ಸಂಟ್ರೇಟರ್ ಪಡೆಯಲಿದೆ. ಇದರಲ್ಲಿ ಪ್ರತಿ 10 ಲೀಟರ್ ಸಾಮರ್ಥ್ಯದ 556 ಮತ್ತು ಪ್ರತಿ 5 ಲೀಟರ್ ಸಾಮರ್ಥ್ಯದ 226 ಕಾನ್ಸಂಟ್ರೇಟರ್ ಗಳು ಸೇರಿದೆ" ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಮತ್ತು ರಾಜ್ಯ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥ ಡಾ. ಸಿ.ಎನ್, ಅಶ್ಬತ್ಥ ನಾರಾಯಣ, “2021 ರ ಜೂನ್ 26 ರಂದು ಪ್ರಾರಂಭವಾದ 'ಆಕಾಂಕ್ಷಾ’ ಸಿಎಸ್ಆರ್ ಪೋರ್ಟಲ್ ಮೂಲಕ ಆರೋಗ್ಯಕ್ಕೆ ಅಗತ್ಯವಿರುವ 229 ಕೋಟಿ ರೂ. ಗಳ ವಿವಿಧ ವೈದ್ಯಕೀಯ ಉಪಕರಣಗಳು ಇಲಾಖೆಯಿಂದ ಒದಗಿಸಲಾಗಿದೆ ಮತ್ತು 136 ದಾನಿಗಳು ಈ ಪೋರ್ಟಲ್ ಮೂಲಕ ನೋಂದಾಯಿಸಿಕೊಂಡಿದ್ದಾರೆ ಮತ್ತು ಇದುವರೆಗೆ 21 ವಿಭಾಗಗಳಲ್ಲಿ ಗುರಿಗಳನ್ನು ಸಾಧಿಸಲಾಗಿದೆ ಮತ್ತು 71 ಪ್ರಗತಿಯಲ್ಲಿದೆ ಮತ್ತು ವಿವರಗಳನ್ನು www.akanksha.karnataka.gov.in ನಲ್ಲಿ ನೋಡಬಹುದು" ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದ ವಿರುದ್ಧ ಸರಕಾರದ ಹೋರಾಟಕ್ಕೆ ಕೈಜೋಡಿಸುವ ಪ್ರತಿಷ್ಠಾನದ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದ ಉಒಅಮುಖ್ಯಮಂತ್ರಿ ಇದುವರೆಗೆ ಪ್ರತಿಷ್ಠಾನವು 47 ಕೋಟಿ ರೂ.ಗಳ ಮೌಲ್ಯದ ಆಮ್ಲಜನಕ ಕಾನ್ಸಂಟ್ರೇಟರ್ ಗಳನ್ನು ದಾನ ಮಾಡಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT