ಸಾಂದರ್ಭಿಕ ಚಿತ್ರ 
ರಾಜ್ಯ

ಬಳ್ಳಾರಿ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋದ ದಂಪತಿ

ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಗಂಡ-ಹೆಂಡತಿ ಇಬ್ಬರೂ ಕೊಚ್ಚಿ ಹೋಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಪಶ್ಚಿಮ ಕಾಲುವೆ ಬಳಿ ಸಂಭವಿಸಿದೆ.

ಬಳ್ಳಾರಿ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಗಂಡ-ಹೆಂಡತಿ ಇಬ್ಬರೂ ಕೊಚ್ಚಿ ಹೋಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಪಶ್ಚಿಮ ಕಾಲುವೆ ಬಳಿ ಸಂಭವಿಸಿದೆ. 

ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಳ್ಳಗಳು ತುಂಬಿದ್ದವು. ಆದರೆ ಕೊಚ್ಚಿ ಹೋದ ದಂಪತಿಗೆ ಹಳ್ಳದ ನೀರಿನ ಮಟ್ಟ ಹೆಚ್ಚಿರುವುದು ತಿಳಿದಿರಲಿಲ್ಲ. ರಾತ್ರಿ ಸಂಬಂಧಿಕರೊಬ್ಬರ ಊರಿಗೆ ಹೋಗಿ ಮನೆಗೆ ವಾಪಾಸಾಗುವ ಹೊತ್ತಿಗೆ ಈ ಘಟನೆ ನಡೆದಿದೆ. 50 ವರ್ಷದ ಮಲ್ಲಿಕಾರ್ಜುನ ಮತ್ತು 46 ವರ್ಷದ ನಿರ್ಮಲಮ್ಮ ನೀರಿನಲ್ಲಿ ಕೊಚ್ಚಿ ಹೋದ ಮೃತ ದುರ್ದೈವಿಗಳು.

ಮೃತ ದಂಪತಿ ಹೊಳೆ ಮುತ್ಕೂರು ಗ್ರಾಮದವರು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊದಲು ಮಲ್ಲಿಕಾರ್ಜುನ ಎಂಬುವವರ ಮೃತ ದೇಹ ಪತ್ತೆಯಾಗಿದ್ದು, ನಿರ್ಮಲಮ್ಮನ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿತ್ತು. ಇದೀಗ ಇಬ್ಬರ ಶವ ಸಿಕ್ಕಿದೆ. ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT