ಸಂಗ್ರಹ ಚಿತ್ರ 
ರಾಜ್ಯ

ಧಾರವಾಡ: ಬೀದಿ ನಾಯಿಗಳ ದಾಳಿಗೆ 8 ವರ್ಷದ ಬಾಲಕ ಬಲಿ

ಬೀದಿ ನಾಯಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ 8 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಧಾರವಾಡದ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ನಡೆದಿದೆ.

ಧಾರವಾಡ: ಬೀದಿ ನಾಯಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ 8 ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಧಾರವಾಡದ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ನಡೆದಿದೆ.

ಬಾಬುಲ್ ರಾಠೋಡ (8) ಸಾವನ್ನಪ್ಪಿದ ಬಾಲಕ. ರಾಯಚೂರು ಜಿಲ್ಲೆಯ ಲಿಂಗಸೂರು ಮೂಲದ ಗೋಪಾಲ್ ಹಾಗು ಚನ್ನಮ್ಮ ದಂಪತಿಯ ಪುತ್ರ ಬಾಬುಲ್ ರಾಠೋಡ ಕಟ್ಟಡ ಕಾಮಗಾರಿಗಾಗಿ ಪೋಷಕರ ಜೊತೆ ಧಾರವಾಡಕ್ಕೆ ಬಂದಿದ್ದ.

ಬಾಲಕನನ್ನು ಕೆಲಸದ ಜಾಗದಲ್ಲಿ ಬಿಟ್ಟು ಪೋಷಕರು ತಿಂಡಿ ತಿನ್ನಲು ಹೋಗಿದ್ದರು. ಈ ವೇಳೆ ನಾಯಿಗಳು ಬಾಲಕನ ಮೇಲೆರಗಿವೆ. ನಾಯಿಗಳ ದಾಳಿಯಿಂದ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. 

ಮೃತಪಟ್ಟ ಬಾಲಕನ ಪೋಷಕರು ರಾಯಚೂರು ಮೂಲದವರಾಗಿದ್ದು, ಕಟ್ಟಡ ನಿರ್ಮಾಣ ಕೆಲಸಕ್ಕಾಗಿ ಧಾರವಾಡಕ್ಕೆ ಬಂದಿದ್ದರು.

ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಾಯಿ ಕಡಿತದಿಂದಲೇ ಬಾಲಕ ಸಾವನ್ನಪ್ಪಿರುವುದನ್ನು ಪೊಲೀಸರು ದೃಢಪಡಿಸಿಲ್ಲ. ವೈದ್ಯಕೀಯ ವರದಿ ಬಂದ ಬಳಿಕ ಸತ್ಯಾಂಶ ತಿಳಿದುಬರಲಿದೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT