ಸಂಗ್ರಹ ಚಿತ್ರ 
ರಾಜ್ಯ

ಕೈಗಾರಿಕಾ ಕ್ಷೇತ್ರಕ್ಕೆ ಪ್ರತ್ಯೇಕ ಆದಾಯ ತೆರಿಗೆ ಸ್ಲ್ಯಾಬ್ ಜಾರಿಗೆ ರಾಜ್ಯ ಸರ್ಕಾರ ಚಿಂತನೆ

ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲ್ಯಾಬ್ ಅನ್ನು ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಂಗಳೂರು: ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲ್ಯಾಬ್ ಅನ್ನು ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಆಸ್ತಿ ತೆರಿಗೆ ಪರಿಷ್ಕರಣೆಯ ಕುರಿತಂತೆ ನಗರದ ಎಫ್‍ಕೆಸಿಸಿಐಯಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸಚಿವ ಭೈರತಿ ಬಸವರಾಜ್ ಹಾಗೂ ಜಗದೀಶ್ ಶೆಟ್ಟರ್ ಭಾಗವಹಿಸಿದ್ದರು. 

ಕಾರ್ಯಕ್ರಮದಲ್ಲಿ ಮಾತನಾಡಿರುವ ಶೆಟ್ಟರ್ ಅವರು, `ಆಸ್ತಿ ತೆರಿಗೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಕೈಗಾರಿಕೋದ್ಯಮಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ಈಗಾಗಲೇ ನಗರಾಭಿವೃದ್ದಿ ಹಾಗೂ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ, ಈ ಬಾರಿಯ ಆಯವ್ಯಯದಲ್ಲಿ ಹಾಗೂ ನೂತನ ಕೈಗಾರಿಕಾ ನೀತಿಯಲ್ಲೂ ಪ್ರಸ್ತಾಪಿಸಲಾಗಿದೆ. ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ನೂತನ ಸ್ಲ್ಯಾಬ್ ಅನ್ನು ರಚಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಈ ವಿಷಯವಾಗಿ ಸಚಿವ ಸಂಪುಟದ ಮುಂದೆ ನಗರಾಭಿವೃದ್ದಿ ಇಲಾಖೆಯ ವತಿಯಿಂದ ಶೀಘ್ರದಲ್ಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು. 

ಕೈಗಾರಿಕೆಗಳಿಗೋಸ್ಕರ ಮದ್ಯಪತ ಆದಾಯ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರಲು ನಾವು ಸನ್ನದ್ಧರಾಗಿದ್ದೇವೆ. ಆದಷ್ಟು ಬೇಗ ಜಾರಿಗೆ ತರುತ್ತೇವೆ. ಕೈಗಾರಿಕೆಗಳಿಂದ ಸಂಗ್ರಹವಾಗುವ ತೆರಿಗೆಯಲ್ಲಿ ಶೇ.70ರಷ್ಟನ್ನು ಆಯಾ ಕೈಗಾರಿಕೆಗಳ ಅಭಿವೃದ್ಧಿಗೆ ಬಳಕೆ ಮಾಡಿಕೊಂಡು ಉಳಿದ ಶೇ.30ರಷ್ಟು ಹಣವನ್ನು ಸ್ಥಳೀಯ ಸಂಸ್ಥೆಗಳಿಗೆ ನೀಡಿದರೆ, ಕೈಗಾರಿಕಾ ಟೌನ್‍ಶಿಪ್ ಬೆಳವಣಿಗೆಗೆ ಸಹಕಾರಿಯಾಗಲಿದೆ. ಇದರ ಬಗ್ಗೆ ನಾವು ಆದಷ್ಟು ಬೇಗ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT