ಸಾಂದರ್ಭಿಕ ಚಿತ್ರ 
ರಾಜ್ಯ

ವಿದೇಶಿ ಕಂಪನಿಗಳಲ್ಲಿ ನೌಕರಿ ಕೊಡಿಸುವುದಾಗಿ ವಂಚನೆ: ಬೆಂಗಳೂರಿನಲ್ಲಿ ಓರ್ವನ ಬಂಧನ

ಅಂತಾರಾಷ್ಟ್ರೀಯ ಕಂಪೆನಿಗಳಲ್ಲಿ ಕೆಲಸ ಕೊಡಿಸುತ್ತೇವೆಂದು ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯೊಬ್ಬನನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಬೆಂಗಳೂರು: ಅಂತಾರಾಷ್ಟ್ರೀಯ ಕಂಪೆನಿಗಳಲ್ಲಿ ಕೆಲಸ ಕೊಡಿಸುತ್ತೇವೆಂದು ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯೊಬ್ಬನನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. 

ಬಸವನಗುಡಿಯ ಕೃಷ್ಟ್ ಪಾರ್ಕ್ ಅಪಾರ್ಟ್‍ಮೆಂಟ್ ನಿವಾಸಿ ಶ್ರೀನಿವಾಸ ರಾಘವನ್ ಅಯ್ಯಂಗಾರ್ (55) ಬಂಧಿತ ಆರೋಪಿ. ಈತ ತಾನು ಮೈಕ್ರೋಸಾಫ್ಟ್ ಕಂಪೆನಿಯ ಉದ್ಯೋಗಿ ಎಂದು ನಕಲಿ ಐಡಿ ಕಾರ್ಡ್ ಮತ್ತು ವಿಸಿಟಿಂಗ್ ಕಾರ್ಡ್‍ಗಳನ್ನು ಮಾಡಿಕೊಂಡು ವಿಆರ್‍ಆರ್ ವೆಂಚರ್ಸ್ ಎಂಬ ಕಂಪೆನಿಯನ್ನು ಪ್ರಾರಂಭಿಸಿದ್ದರು.

ತನ್ನ ಕಂಪೆನಿಯಲ್ಲಿ ರಾಮಕೃಷ್ಣ , ಸಂತೋಷ್‍ಕುಮಾರ್ ಮತ್ತು ರಾಜೀವ್ ರಾವ್ ಎಂಬುವರನ್ನು ಡೈರೆಕ್ಟರ್ ಎಂದು ನೇಮಿಸಿಕೊಂಡು ಉದ್ಯೋಗಾಕಾಂಕ್ಷಿಗಳಿಗೆ ವಿವಿಧ ಪ್ರತಿಷ್ಟಿತ ಕಂಪೆನಿಗಳಲ್ಲಿ ಹಾಗೂ ದೇಶ ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷ ಒಡ್ಡಿ ಹಣ ಪಡೆದು ವಂಚಿಸುತ್ತಿದ್ದರು.

ನಕಲಿ ಇ ಮೇಲ್ ಐಡಿಗಳನ್ನು ತಯಾರಿಸಿಕೊಂಡು ಅಭ್ಯರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾಗಿರುವಂತೆ ಇ ಮೇಲ್ ಕಳುಹಿಸಿ ಅವರಿಂದ ವೀಸಾ, ಸ್ಟಾಂಪಿಂಗ್, ಡಾಕ್ಯುಮೆಂಟ್ ವೆರಿಫಿಕೇಶನ್ ಫೀಸ್ ಎಂದು ಹಣ ಪಡೆದು ವಂಚಿಸಿರುವುದು ವಿಚಾರಣೆಯಿಂದ ತಿಳಿದು ಬಂದಿದೆ.

ಕೆನಡಾ ಮೂಲದ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ 3 ಲಕ್ಷ ಹಣ ಪಡೆದಿದ್ದಾರೆ ಎಂದು ಅರುಣಾ ಬಿವಿ ಎಂಬುವರು ದೂರು ದಾಖಲಿಸಿದ್ದಾರೆ, ಇದಲ್ಲದೇ 4 ಮಂದಿಯು 20 ಲಕ್ಷಕ್ಕೂ ಅಧಿಕ ಹಣವನ್ನು ವಂಚಿಸಿದ್ದಾರೆ ಎಂದು ಹೇಳಲಾಗಿದೆ,  ಸುಮಾರು 40 ಮಂದಿಯಿಂದ ಹಣ ಪಡೆದು ಮೋಸ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇದೇ ವೇಳೆ ಉಳಿದ ನಿರ್ದೇಶಕರುಗಳನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT