ಸಿಸಿಬಿ ಪೊಲೀಸರ ದಾಳಿ ಮತ್ತು ವಶಪಡಿಸಿಕೊಳ್ಳಲಾದ ವಸ್ತುಗಳು 
ರಾಜ್ಯ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ, ರೌಡಿಗಳ ನಿವಾಸ ಮೇಲೆ ಸಿಸಿಬಿ ದಾಳಿ; ಹಲವು ವಸ್ತುಗಳು ವಶ

ಶನಿವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ಬೆಂಗಳೂರು: ಶನಿವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.

ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ, ಕೈದಿಗಳು ಮೊಬೈಲ್ ಬಳಸುತ್ತಿದ್ದಾರೆ, ಅಲ್ಲಿಂದ ಅಪರಾಧ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದರು, ಮಾದಕ ವಸ್ತುವನ್ನು ಬಳಸುತ್ತಿದ್ದರು ಎಂಬ ಮಾಹಿತಿ ಬಂದಿತ್ತು.

ನಿಖರ ಮಾಹಿತಿ ಆಧಾರದ ಮೇರೆಗೆ ಸಿಸಿಬಿ ವಿಶೇಷ ತಂಡ ಜೈಲಿಗೆ ಇಂದು ದಾಳಿ ನಡೆಸಿ ಎಲ್ಲ ಕಡೆ ತಪಾಸಣೆ ನಡೆಸಿತು. ಮೊಬೈಲ್, ಸಿಮ್ ಕಾರ್ಡುಗಳು, ಗಾಂಜಾ, ಚಾಕು ಸೇರಿದಂತೆ ಹಲವು ವಸ್ತುಗಳನ್ನು ಕೈದಿಗಳ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ,ಇಂದು ನಸುಕಿನ ಜಾವ 5 ಗಂಟೆಗೆ ಶ್ವಾನ ದಳದ ಮೂಲಕ ಸಿಸಿಬಿ ತಂಡ ದಾಳಿ ನಡೆಸಿತು ಎಂದು ಸಿಸಿಬಿ ವಿಶೇಷ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಇದರ ಜೊತೆಗೆ ಬೆಂಗಳೂರಿನ ಪಶ್ಚಿಮ ಭಾಗದ ಹಲವು ರೌಡಿಗಳ ನಿವಾಸದ ಮೇಲೆ ಕೂಡ ಪೊಲೀಸರು ದಾಳಿ ಮಾಡಿ ಮಾರಕಾಸ್ತ್ರ ಹಾಗೂ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಮತ್ತು ಬ್ಯಾಡರಹಳ್ಳಿ ಪ್ರದೇಶಗಳಲ್ಲಿ ನಸುಕಿವ ಜಾವದಿಂದಲೇ ದಾಳಿ ಆರಂಭವಾಗಿದೆ. 105 ಮನೆಗಳ ಮೇಲೆ ದಾಳಿ ಮಾಡಲಾಗಿದ್ದು 76 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT