ದೇವಾಲಯದ ಸ್ಥಳದಲ್ಲಿ ಪರಿಶೀಲನೆನಡೆಸುತ್ತಿರುವ ಅಧಿಕಾರಿಗಳು 
ರಾಜ್ಯ

ತುಮಕೂರು ದೇವಾಲಯದ ಬಳಿ ಮಹಿಳೆಯ ಶವ ಪತ್ತೆ: ನಿಧಿಗಾಗಿ ಬಲಿ ಶಂಕೆ, ತನಿಖೆ ಚುರುಕುಗೊಳಿಸಿದ ಪೊಲೀಸರು

ತುಮಕೂರಿನ ಎಂ.ಗೊಲ್ಲಹಳ್ಳಿ ಗ್ರಾಮದ ಬೆಟ್ಟದ ಮೇಲಿರುವ ಆಂಜನೇಯ ಸ್ವಾಮಿ ದೇವಾಲಯದ ಬಳಿ ಮಹಿಳೆ ಶವ ಪತ್ತೆಯಾಗಿದ್ದು, ನಿಧಿಗಾಗಿ ಬಲಿ ಕೊಟ್ಟಿರಬಹುದು ಎಂಬ ಶಂಕೆಗಳು ವ್ಯಕ್ತವಾಗತೊಡಗಿವೆ. 

ತುಮಕೂರು: ತುಮಕೂರಿನ ಎಂ.ಗೊಲ್ಲಹಳ್ಳಿ ಗ್ರಾಮದ ಬೆಟ್ಟದ ಮೇಲಿರುವ ಆಂಜನೇಯ ಸ್ವಾಮಿ ದೇವಾಲಯದ ಬಳಿ ಮಹಿಳೆ ಶವ ಪತ್ತೆಯಾಗಿದ್ದು, ನಿಧಿಗಾಗಿ ಬಲಿ ಕೊಟ್ಟಿರಬಹುದು ಎಂಬ ಶಂಕೆಗಳು ವ್ಯಕ್ತವಾಗತೊಡಗಿವೆ. 

ದೇವಾಲಯದ ಒಳಭಾಗದಲ್ಲಿರುವ ಆಂಜನೇಯ ವಿಗ್ರಹದ ಮುಂಭಾಗದಲ್ಲಿ ಭೂಮಿಯನ್ನು ಅಗೆದಿರುವುದು, ಶವದ ಸಮೀಪ ಅರಿಶಿನ, ಕುಂಕುಮ ಚೆಲ್ಲಾಡಿರುವುದು, ಪೂಜೆ ಸಲ್ಲಿಸಿರುವ ದೃಶ್ಯಗಳು ಕಂಡು ಬಂದಿವೆ. ಹೀಗಾಗಿ ನಿಧಿಗಾಗಿ ಬಲಿ ಕೊಟ್ಟಿರಬಹುದು ಎಂಬ ಶಂಕೆಗಳು ವ್ಯಕ್ತವಾಗಿವೆ. 

ಕುರಿಗಾಹಿಗಳು ಕುರಿ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಸ್ಥಳದಲ್ಲಿ ದುರ್ವಾಸನೆ ಬಂದಿದ್ದು, ದೇವಾಲಯದ ಅಕ್ಕಪಕ್ಕ ನೋಡಿದಾಗ ಮಹಿಳೆಯ ಕೂದಲು ಕಂಡು ಬಂದಿದೆ. ನಂತರ ಮೃತದೇಹ ಸಂಪೂರ್ಣ ಗುರುತು ಸಿಗದಂತೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೂಡಲೇ ಈ ಕುರಿತು ಕುರಿಗಾಹಿಗಳು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. 

ಗಾಬರಿಗೊಂಡ ಗ್ರಾಮಸ್ಥರು ಸ್ಥಳಕ್ಕೆ ಬಂದು ಖಚಿತಪಡಿಸಿಕೊಂಡ ನಂತರ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಇದು ಕೊಲೆಯೊ ಅಥವಾ ಆತ್ಮಹತ್ಯೆಯೊ ಎಂಬುದು ತಿಳಿಯಲಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆ ಮತ್ತು ನೆರೆಯ ಗ್ರಾಮಗಳಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣಗಳ ಆಧಾರದ ಮೇಲೆ ಮಹಿಳೆಯ ಗುರುತು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಮಹಿಳೆಯ ಗುರುತು ಪತ್ತೆಯಾಗುತ್ತಿದ್ದಂತೆಯೇ ಪ್ರಕರಣ ಕೊಲೆಯೋ ಅಥವಾ ಬಲಿದಾನ ಕುರಿತು ಸತ್ಯಾಸತ್ಯತೆ ತಿಳಿಯಲು ಸಹಾಯಕವಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ. 

ಎಂ.ಗೊಲ್ಲಹಳ್ಳಿ ಬೆಟ್ಟದ ಮೇಲಿರುವ ಆಂಜನೇಯಸ್ವಾಮಿ ದೇವಾಲಯದ ಬಳಿ ಆಗಾಗೆ ನಿಧಿಗಾಗಿ ಕಿಡಿಗೇಡಿಗಳು ಭೂಮಿಯನ್ನು ಅಗೆದು ದೇಗುಲದ ಆವರಣವನ್ನು ಹಾಳು ಮಾಡುತ್ತಿರುತ್ತಾರೆ. ಈಗಲೂ ಅದೇ ರೀತಿ ಆಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT