ಮುರುಗೇಶ್ ನಿರಾಣಿ 
ರಾಜ್ಯ

ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ; ಮುಖ್ಯ ಎಂಜಿನಿಯರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ: ಸಚಿವ ಮುರುಗೇಶ್ ನಿರಾಣಿ

ಕೃಷ್ಣ ರಾಜ ಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ನೀಡಿರುವ ಹೇಳಿಕೆ ಈಗ ಸಂಸದೆ ಮತ್ತು ಜೆಡಿಎಸ್ ನಾಯಕರ ಮಧ್ಯೆ ತೀವ್ರ ವಾಗ್ಯುದ್ಧಗಳಿಗೆ ಕಾರಣವಾಗಿರುವುದರ ಮಧ್ಯೆ ಗಣಿ ಇಲಾಖೆ ಸಚಿವ ಮುರುಗೇಶ್ ನಿರಾಣಿ ವಿಜಯಪುರದಲ್ಲಿ ಹೇಳಿಕೆ ನೀಡಿದ್ದಾರೆ.

ವಿಜಯಪುರ: ಕೃಷ್ಣ ರಾಜ ಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ನೀಡಿರುವ ಹೇಳಿಕೆ ಈಗ ಸಂಸದೆ ಮತ್ತು ಜೆಡಿಎಸ್ ನಾಯಕರ ಮಧ್ಯೆ ತೀವ್ರ ವಾಗ್ಯುದ್ಧಗಳಿಗೆ ಕಾರಣವಾಗಿರುವುದರ ಮಧ್ಯೆ ಗಣಿ ಇಲಾಖೆ ಸಚಿವ ಮುರುಗೇಶ್ ನಿರಾಣಿ ವಿಜಯಪುರದಲ್ಲಿ ಹೇಳಿಕೆ ನೀಡಿದ್ದಾರೆ.

ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ, ಖುದ್ದು ಮುಖ್ಯ ಎಂಜಿನಿಯರ್ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಿದ್ದಾರೆ. ನಾನು ಫೋನ್ ಮಾಡಿ ದೃಢಪಡಿಸಿಕೊಂಡಿದ್ದೇನೆ, ಜನರು ಆತಂಕಗೊಳ್ಳಬೇಕಾಗಿಲ್ಲ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯುತ್ತಿಲ್ಲ, ಮಂಡ್ಯ ರಾಜಕಾರಣ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ದಳಪತಿಗಳು ಮತ್ತು ಸಂಸದೆ ಸುಮಲತಾ ಮಧ್ಯೆ ತೀವ್ರ ಮಾತಿಕ ಚಕಮಕಿಯ ಬಗ್ಗೆ ಕೇಳಿದಾಗ ಮಂಡ್ಯ ರಾಜಕಾರಣದ ಬಗ್ಗೆ ನನಗೆ ಗೊತ್ತಿಲ್ಲ, ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.

ಕೆಆರ್ ಎಸ್ ಜಲಾಶಯದಿಂದ 10ಕಿಲೋ ಮೀಟರ್ ಒಳಗೆ ಬೇಬಿ ಬೆಟ್ಟವಿದೆ, ಇಲ್ಲಿ ಗಣಿಗಾರಿಕೆಯಿಂದ ಭೂಮಿ ನಡುಗುವುದರಿಂದ ಜಲಾಶಯಕ್ಕೆ ಹಾನಿಯಾಗಬಾರದೆಂದು ಗಣಿಗಾರಿಕೆ ನಿಲ್ಲಿಸಿದ್ದೇವೆ, ಮತ್ತೆ ಆರಂಭಿಸಲು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ವರದಿ ನೀಡಿದ ಮೇಲೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT