ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಸರಗಳ್ಳನ ಹಿಡಿಯಲು ಹೋದ ಪೋಲೀಸ್ ವಾಹನ ಅಪಘಾತ, ನಾಲ್ವರಿಗೆ ಗಾಯ

ಸರಗಳ್ಳತನದ ಆರೋಪಿಯನ್ನು ಪೋಲೀಸರು ಬೆನ್ನಟ್ಟಿವಾಗ ಎರಡು ಅಪಘಾತಗಳು ಸಂಭವಿಸಿದ ಘಟನೆ ಬೆಂಗಳುರಿನಲ್ಲಿ ನಡೆದಿದೆ. ಅಪಘಾತದಿಂದ ನಾಲ್ವರು ಗಾಯಗೊಂಡಿದ್ದಾರೆ.

ಬೆಂಗಳೂರು: ಸರಗಳ್ಳತನದ ಆರೋಪಿಯನ್ನು ಪೋಲೀಸರು ಬೆನ್ನಟ್ಟಿವಾಗ ಎರಡು ಅಪಘಾತಗಳು ಸಂಭವಿಸಿದ ಘಟನೆ ಬೆಂಗಳುರಿನಲ್ಲಿ ನಡೆದಿದೆ. ಅಪಘಾತದಿಂದ ನಾಲ್ವರು ಗಾಯಗೊಂಡಿದ್ದಾರೆ.

ಬೆಳಿಗ್ಗೆ 9 ಗಂಟೆ ಸುಮಾರಿಗೆ ಸರ್ಜಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಮಂಜುಳಾ ಎಂಬ ಮಹಿಳೆಯ ಸರವನ್ನು ದ್ವಿಚಕ್ರ ವಾಹನ ಸವಾರರಿಬ್ಬರು ಕಸಿದಿದ್ದಾರೆ. 112 ಪೆಟ್ರೋಲಿಂಗ್ ವಾಹನವು ದುಷ್ಕರ್ಮಿಗಳನ್ನು ಬೆನ್ನಟ್ಟಿದೆ. ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ, ವೇಗವಾಗಿ ಬಂದ ದುಷ್ಕರ್ಮಿಗಳು ಬುರಗುಂಟೆಯಲ್ಲಿ ಭದ್ರತಾ ಸಿಬ್ಬಂದಿಯಾದ ಕಮಲ್ ಮೌತ್ ಎನ್ನುವವರನ್ನು ಬೈಕ್ ಗುದ್ದಿಸಿ ಬೀಳಿಸಿದ್ದಾರೆ. ಆ ವೇಳೆ ಮೌತ್ ಗಾಯಗೊಂಡರೂ ದುಷ್ಕರ್ಮಿಗಳು ಓಡಿಹೋದರು. ಪೋಲೀಸರು ಮೌತ್ ಅವರನ್ನು ಸ್ಪತ್ರೆಗೆ ಕರೆದೊಯ್ಯುತ್ತಿರುವಾಗ, ಅತ್ತಿಬೆಲೆ -ಸರ್ಜಾಪುರ ರಸ್ತೆಯಲ್ಲಿ ಸ್ಕೂಟರ್ ಸವಾರನೊಬ್ಬ ಯಾವುದೇ ಸೂಚನೆ ಇಲ್ಲದೆ  ಡಿಕ್ಕಿ ಹೊಡೆಯುವಂತೆ ನುಗ್ಗಿದ್ದಾನೆ.

ಸ್ಕೂಟರ್ ಗೆ ವಾಹನ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಪ್ರಯತ್ನದಲ್ಲಿದ್ದಾಗ ವಾಹನ ಅವನ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿಯಾಗಿದೆ ಆ ಕಂಬ ಸರಕುಗಳ ಸಾಗಿಸುತ್ತಿದ್ದ ಆಟೋದ ಮೇಲೆ ಬಿದ್ದಿದೆ. ಅದರಲ್ಲಿದ್ದ ಒಬ್ಬ ಗಾಯಗೊಂಡಿದ್ದಾನೆ. ಅಲ್ಲದೆ ಪೋಲೀಸ್ ವಾಹನ ಚಾಲಕ ಮಲ್ಲಿಕಾರ್ಜುನ ಸಹ ಗಾಯಾಳುವಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT