ಸಂಗ್ರಹ ಚಿತ್ರ 
ರಾಜ್ಯ

ಧಾರವಾಡ: ಕುಡಿಯೋಕೆ ಹಣ ಕೊಡದ ಪತ್ನಿಯ ಮೂಗು ಕಚ್ಚಿದ ಪತಿ ಪರಾರಿ

ಕುಡಿಯಲು ಹಣ ನೀಡಿಲ್ಲ ಎಂಬ ಕಾರಣಕ್ಕೆ ಜಗಳವಾಡಿ ಪತ್ನಿಯ ಮೂಗನ್ನು ಕಚ್ಚಿ ಗಾಯಗೊಳಿಸಿದ ಪತಿ ಪರಾರಿಯಾಗಿರುವ ಘಟನೆ ಧಾರವಾಡದ  ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ.

ಧಾರವಾಡ: ಕುಡಿಯಲು ಹಣ ನೀಡಿಲ್ಲ ಎಂಬ ಕಾರಣಕ್ಕೆ ಜಗಳವಾಡಿ ಪತ್ನಿಯ ಮೂಗನ್ನು ಕಚ್ಚಿ ಗಾಯಗೊಳಿಸಿದ ಪತಿ ಪರಾರಿಯಾಗಿರುವ ಘಟನೆ ಧಾರವಾಡದ  ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ.

ಉಮೇಶ್  ಎಂಬಾತ ಪತ್ನಿ ಗೀತಾಳ ಮೂಗು ಕಚ್ಚಿ ಗಾಯಗೊಳಿಸಿದ್ದಲ್ಲದೆ ಪತ್ನಿಯ ಮೇಲೆ ಹಲ್ಲೆ ನಡೆಸುವುದನ್ನು ತಡೆಯಲು ಬಂದ ಅತ್ತೆಯ ಕತ್ತು ಹಿಸುಕಿ ಅವಳ ಮೇಲೆ ಸಹ ಹಲ್ಲೆ ಮಾಡಿದ್ದಾನೆ.

ಗಾರೆ ಕೆಲಸ ಮಾಡುವ ಉಮೇಶ್ ಕಳೆದ ಐದು ವರ್ಷದ ಹಿಂದೆ ಪತ್ನಿಯನ್ನು ಬಿಟ್ಟು ಹೋದವನು ಐದು ತಿಂಗಳ ಹಿಂದೆ ವಾಪಾಸಾಗಿದ್ದ.

ಆದರೆ ಹಾಗೆ ಹಿಂತಿರುಗಿದವ ಮದ್ಯ ಸೇವಿಸಲಿಕ್ಕಾಗಿ ಹಣ ನೀಡುವಂತೆ ಪ್ರತಿ ದಿನ ಗೀತಾಳ ಜತೆ ಜಗಳವಾಡುತ್ತಿದ್ದ. ಕಳೆದ ರಾತ್ರಿ ಸಹ ಇದೇ ವಿಷಯದಲ್ಲಿ ಜಗಳವಾದಾಗ ಉಮೇಶ್ ಆಕೆಯ ಮೂಗನ್ನು ಕಚ್ಚಿ ಕತ್ತರಿಸಿದ್ದಾನೆ.

ಗೀತಾಗೆ  ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿಯ ಈ ಕೃತ್ಯದ ಬಗ್ಗೆ ಗೀತಾ  ಗ್ರಾಮೀಣ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು ಉಮೇಶ್ ಗಾಗಿ ಪೋಲೀಸರ ಶೋಧ ಮುಂದುವರಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT