ಬಡಗಲಪುರ ನಾಗೇಂದ್ರ 
ರಾಜ್ಯ

ಗಣಿಗಾರಿಕೆ ವಿರುದ್ಧದ ಸುಮಲತಾ ಹೋರಾಟಕ್ಕೆ ರೈತ ಸಂಘದ ಬೆಂಬಲ

ಕೆಆರ್ ಎಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟಕ್ಕೆ ಸಂಸದೆ ಸುಮಲತಾ ಅವರಿಗೆ ರೈತ ಸಂಘ ಬೆಂಬಲ ವ್ಯಕ್ತಪಡಿಸಿದೆ.

ಮೈಸೂರು: ಕೆಆರ್ ಎಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟಕ್ಕೆ ಸಂಸದೆ ಸುಮಲತಾ ಅವರಿಗೆ ರೈತ ಸಂಘ ಬೆಂಬಲ ವ್ಯಕ್ತಪಡಿಸಿದೆ.

ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರೈತರ ಜೀವನಾಡಿ ಕೆಆರ್ ಎಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಜಲಾಶಯದ ಅಸ್ತಿತ್ವಕ್ಕೆ ಅಪಾಯವಿದೆ. ಇದರ ಮೇಲೆ ಅವಲಂಬಿತರಾಗಿರುವ ಸಾವಿರಾರು ಜನರ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದರು.

ಜಲಾಶಯದ ಸುತ್ತಮುತ್ತಲಿನ 20 ಮೀಟರ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಅಥವಾ ಸಕ್ರಮ ಯಾವುದೇ ಗಣಿಗಾರಿಕೆಯಾಗಲೀ, ಅದನ್ನು  ಸಂಪೂರ್ಣವಾಗಿ ನಿಲ್ಲಿಸಬೇಕು, ಈ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.

ಅಕ್ರಮ ಗಣಿಗಾರಿಕೆ ಕುರಿತು ಸಂಸದೆ ಸುಮಲತಾ ಹೋರಾಟಕ್ಕೆ ನಿಂತಿದ್ದು, ಅದರ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಈ ವಿಚಾರದಲ್ಲಿ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಜೆಡಿಎಸ್ ಮುಖಂಡರ ನಡುವೆ ವಾಕ್ಸಮರ ತಾರಕಕ್ಕೇರಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT