ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ವಿತರಿಸುತ್ತಿರುವ ಡಿಸಿಎಂ ಅಶ್ವತ್ಥ್ ನಾರಾಯಣ್ 
ರಾಜ್ಯ

ಭೌತಿಕ ತರಗತಿಗಳ ಪುನರಾರಂಭಿಸಿ: ಸರ್ಕಾರಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯ

ತಜ್ಞರ ಶಿಫಾರಸಿನಂತೆ ರಾಜ್ಯದಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಬೇಕು ಎಂದು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. 

ಬೆಂಗಳೂರು: ತಜ್ಞರ ಶಿಫಾರಸಿನಂತೆ ರಾಜ್ಯದಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಬೇಕು ಎಂದು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. 

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಹಲಗೇರಿಯವರು ಸರ್ಕಾರಕ್ಕೆ ಮನವಿ ಮಾಡಿದ್ದು, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ. ಇದರಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಕರಪತ್ರ ಮುದ್ರಿಸಿ ಗಲ್ಲಿಗಲ್ಲಿಗಳಿಗೆ ಹೋಗಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವಂತೆ ಶಿಕ್ಷಕರು ಪೋಷಕರ ಮನವೊಲಿಸಿದ್ದಾರೆ. ಧ್ವನಿವರ್ಧಕದ ಮೂಲಕ ಪ್ರಚಾರ ಕೈಗೊಂಡ ಕಾರಣ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಾಗಿದೆ. ತಜ್ಞರ ಸಮಿತಿ ಶಿಫಾರಸಿನಂತೆ ರಾಜ್ಯದಲ್ಲಿ ಕೂಡಲೇ ಭೌತಿಕ ತರಗತಿಗಳನ್ನು ಆರಂಭಿಸಿ ಮಕ್ಕಳಿಗೆ ಹಾಲು, ಮಧ್ಯಾಹ್ನದ ಬಿಸಿಯೂಟ ನೀಡಬೇಕು ಎಂದು ಹೇಳಿದ್ದಾರೆ.

ಕಳೆದ 15 ತಿಂಗಳಿನಿಂದ ಶಾಲೆಗಳು ನಡೆಯದ ಕಾರಣ ಪಾಲಕರು, ಮಕ್ಕಳು ಗೊಂದಲದಲ್ಲಿದ್ದಾರೆ. ಶಿಕ್ಷಕರ ಸಹಿತ ಮಕ್ಕಳ ಆಟ-ಪಾಠ ನೋಡಲು ಪೋಷಕರಿಗೆ ಸಾಧ್ಯವಾಗದ ಪರಿಸ್ಥಿತಿ ಕೊರೋನಾ ಮಹಾಮಾರಿಯಿಂದ ನಿರ್ಮಾಣವಾಗಿದೆ. ಆನ್‍ಲೈನ್‍ನಿಂದ ಕೇವಲ ಶೇ.30 ರಿಂದ 35ರಷ್ಟು ಮಕ್ಕಳು ಮಾತ್ರ ಅಭ್ಯಾಸ ಮಾಡುತ್ತಿದ್ದಾರೆ. ಎಲ್ಲ ಮಕ್ಕಳಿಗೂ ಏಕರೂಪದ ಶಿಕ್ಷಣ ದೊರೆಯಬೇಕೆಂಬುದು ನಮ್ಮ ಸಂಘದ ಆಶಯವಾಗಿದೆ.

ಟಿವಿ, ರೇಡಿಯೋ, ಆನ್‍ಲೈನ್, ವಾಟ್ಸಾಪ್, ಇನ್ನಿತರ ತಂತ್ರಜ್ಞಾನಗಳ ಮೂಲಕ ನೀಡುವ ಶಿಕ್ಷಣ ಪ್ರಾಥಮಿಕ ಹಂತದ ನಂತರದ ಮಕ್ಕಳಿಗೆ ಸೂಕ್ತವಾದರೂ ಅದರಲ್ಲಿಯೂ ಸಾಕಷ್ಟು ತೊಂದರೆಗಳಿವೆ. ಈ ಕಾರಣದಿಂದ ಭೌತಿಕ ತರಗತಿಗಳನ್ನು ಆರಂಭಿಸುವುದು ಸೂಕ್ತ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಾಲೆಗಳನ್ನು ಪ್ರಾರಂಭಿಸಬೇಕು. 1 ರಿಂದ 2ನೆ ತರಗತಿಗೆ ಒಂದು ದಿನ, 3 ರಿಂದ 4ನೆ ತರಗತಿಗಳಿಗೆ ಒಂದು ದಿನ, 5 ರಿಂದ 6ನೆ ತರಗತಿಗಳಿಗೆ 2 ದಿನ, 7 ರಿಂದ 8ನೆ ತರಗತಿಗಳಿಗೆ 2 ದಿನ ಈ ರೀತಿ ಶಾಲೆಗಳನ್ನು ಪ್ರಾರಂಭಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT