ರಾಜ್ಯ

ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಮರ: ಶ್ರೀರಂಗಪಟ್ಟಣದಲ್ಲಿ ಕಲ್ಲು ಕ್ವಾರಿ ಮೇಲೆ ತಹಶಿಲ್ದಾರ್ ದಾಳಿ 

Sumana Upadhyaya

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಅಂಬರೀಷ್ ಸಮರ ಸಾರಿರುವ ಬೆನ್ನಲ್ಲೇ ಭಾನುವಾರ ಶ್ರೀರಂಗಪಟ್ಟಣದಲ್ಲಿ ಅಕ್ರಮ ಗಣಿಗಾರಿಕೆ ಮೇಲೆ ತಹಶಿಲ್ದಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಮಾಹಿತಿ ಪಡೆದ ತಹಶಿಲ್ದಾರ್ ಅವರು ಇತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಕಲ್ಲು ಕ್ವಾರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಅಲ್ಲದೆ ಅಕ್ರಮವೆಂದು ಕಂಡುಬಂದ ಕೂಡಲೇ ಬೀಗ ಜಡಿದಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಹಶಿಲ್ದಾರ್ ಎಚ್ಚರಿಕೆ ನೀಡಿದ್ದಾರೆ.

SCROLL FOR NEXT