ಸುನೀಲ್ ಹೆಗ್ಗರವಳ್ಳಿ 
ರಾಜ್ಯ

ಹಾಯ್ ಬೆಂಗಳೂರು ಮಾಜಿ ಸಂಪಾದಕ ಸುನೀಲ್ ಹೆಗ್ಗರವಳ್ಳಿ ಹೃದಯಘಾತದಿಂದ ನಿಧನ

ಹಿರಿಯ ಕ್ರೈಮ್ ವರದಿಗಾರ, 43 ವರ್ಷದ ಸುನೀಲ್ ಹೆಗ್ಗರವಳ್ಳಿ ಅಕಾಲಿಕ ಸಾವನ್ನಪ್ಪಿದ್ದಾರೆ. 

ಚಿಕ್ಕಮಗಳೂರು: ಹಿರಿಯ ಕ್ರೈಮ್ ವರದಿಗಾರ, 43 ವರ್ಷದ ಸುನೀಲ್ ಹೆಗ್ಗರವಳ್ಳಿ ಅಕಾಲಿಕ ಸಾವನ್ನಪ್ಪಿದ್ದಾರೆ. 

ಹಾಯ್ ಬೆಂಗಳೂರು ಪತ್ರಿಕೆಯ ಮೂಲಕ ತಮ್ಮ ವೃತ್ತಿಜೀವನವನ್ನುಆರಂಭಿಸಿದ ಸುನೀಲ್ ಹೆಗ್ಗರವಳ್ಳಿ, ತಮ್ಮ ಸ್ವಂತ ಜಿಲ್ಲೆಯಾದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರಾಗಿ ಅವರು ಮಾಡಿದ ಸಾಕಷ್ಟು ವರದಿಗಳು ದೊಡ್ಡ ಸಂಚಲನವನ್ನೇ ಮೂಡಿಸಿದ್ದವು. ರವಿ ಬೆಳಗೆರೆಯವರ ಅತ್ಯಾಪ್ತನಾಗಿದ್ದುಕೊಂಡು ನಂತರ ರವಿ‌‌ ಬೆಳಗೆರೆ ಅವರ ಅನಾರೋಗ್ಯದ ಸನ್ನಿವೇಶದಲ್ಲಿ ಪತ್ರಿಕೆಯನ್ನು ಸಂಪಾದಕನಾಗಿ ಮುನ್ನಡೆಸಿದ್ದರು. 

ಆದರೆ ಶೂಟೌಟ್ ವಿವಾದದ ಸನ್ನಿವೇಶದಲ್ಲಿ ರವಿ ಬೆಳಗೆರೆ ಅವರ ಮೇಲೆಯೇ ಸುಪಾರಿ ಆರೋಪ ಮಾಡಿ ಹಾಯ್ ಬೆಂಗಳೂರು ಕಚೇರಿಯಿಂದ ಹೊರಬಿದ್ದಿದ್ದು ರಾಜ್ಯದಲ್ಲಿ ಸುದ್ದಿಯಾಗಿದ್ದರು. ನಂತರ ಚಾರ್ಲಿ ಟೈಮ್ಸ್ ಕ್ರೈಮ್ ಪೇಪರ್ ಶುರುಮಾಡಿದ್ದರು.

ಯೂ ಟ್ಯೂಬ್ ಚಾನೆಲ್ ಕೂಡ ಆರಂಭಿಸಿ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನಕ್ಕೆ ಪತ್ರಕರ್ತ ಸಮೂಹ ವಿಷಾದ-ಸಂತಾಪ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT