ಸುನೀಲ್ ಹೆಗ್ಗರವಳ್ಳಿ 
ರಾಜ್ಯ

ಹಾಯ್ ಬೆಂಗಳೂರು ಮಾಜಿ ಸಂಪಾದಕ ಸುನೀಲ್ ಹೆಗ್ಗರವಳ್ಳಿ ಹೃದಯಘಾತದಿಂದ ನಿಧನ

ಹಿರಿಯ ಕ್ರೈಮ್ ವರದಿಗಾರ, 43 ವರ್ಷದ ಸುನೀಲ್ ಹೆಗ್ಗರವಳ್ಳಿ ಅಕಾಲಿಕ ಸಾವನ್ನಪ್ಪಿದ್ದಾರೆ. 

ಚಿಕ್ಕಮಗಳೂರು: ಹಿರಿಯ ಕ್ರೈಮ್ ವರದಿಗಾರ, 43 ವರ್ಷದ ಸುನೀಲ್ ಹೆಗ್ಗರವಳ್ಳಿ ಅಕಾಲಿಕ ಸಾವನ್ನಪ್ಪಿದ್ದಾರೆ. 

ಹಾಯ್ ಬೆಂಗಳೂರು ಪತ್ರಿಕೆಯ ಮೂಲಕ ತಮ್ಮ ವೃತ್ತಿಜೀವನವನ್ನುಆರಂಭಿಸಿದ ಸುನೀಲ್ ಹೆಗ್ಗರವಳ್ಳಿ, ತಮ್ಮ ಸ್ವಂತ ಜಿಲ್ಲೆಯಾದ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರಾಗಿ ಅವರು ಮಾಡಿದ ಸಾಕಷ್ಟು ವರದಿಗಳು ದೊಡ್ಡ ಸಂಚಲನವನ್ನೇ ಮೂಡಿಸಿದ್ದವು. ರವಿ ಬೆಳಗೆರೆಯವರ ಅತ್ಯಾಪ್ತನಾಗಿದ್ದುಕೊಂಡು ನಂತರ ರವಿ‌‌ ಬೆಳಗೆರೆ ಅವರ ಅನಾರೋಗ್ಯದ ಸನ್ನಿವೇಶದಲ್ಲಿ ಪತ್ರಿಕೆಯನ್ನು ಸಂಪಾದಕನಾಗಿ ಮುನ್ನಡೆಸಿದ್ದರು. 

ಆದರೆ ಶೂಟೌಟ್ ವಿವಾದದ ಸನ್ನಿವೇಶದಲ್ಲಿ ರವಿ ಬೆಳಗೆರೆ ಅವರ ಮೇಲೆಯೇ ಸುಪಾರಿ ಆರೋಪ ಮಾಡಿ ಹಾಯ್ ಬೆಂಗಳೂರು ಕಚೇರಿಯಿಂದ ಹೊರಬಿದ್ದಿದ್ದು ರಾಜ್ಯದಲ್ಲಿ ಸುದ್ದಿಯಾಗಿದ್ದರು. ನಂತರ ಚಾರ್ಲಿ ಟೈಮ್ಸ್ ಕ್ರೈಮ್ ಪೇಪರ್ ಶುರುಮಾಡಿದ್ದರು.

ಯೂ ಟ್ಯೂಬ್ ಚಾನೆಲ್ ಕೂಡ ಆರಂಭಿಸಿ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನಕ್ಕೆ ಪತ್ರಕರ್ತ ಸಮೂಹ ವಿಷಾದ-ಸಂತಾಪ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT