ರಾಮದಾಸ್ ಅಠಾವಳೆ 
ರಾಜ್ಯ

ಮುಸ್ಲಿಮರಲ್ಲಿ ಮೂರ್ನಾಲ್ಕು ಮದುವೆ ಆಗುವ ಪರಿಪಾಠದಿಂದ ಮಕ್ಕಳ ಸಂಖ್ಯೆ ಹೆಚ್ಚಾಗಿದೆ: ರಾಮದಾಸ್ ಅಠಾವಳೆ 

ಎಲ್ಲ ಸಮುದಾಯಗಳಲ್ಲಿ ಇರುವ ಹಿಂದುಳಿದ ಮತ್ತು ಬಡ ಜನರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕಿದೆ. ಅದಕ್ಕೆ ಪೂರಕವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದರು.

ಬೆಂಗಳೂರು: ಎಲ್ಲ ಸಮುದಾಯಗಳಲ್ಲಿ ಇರುವ ಹಿಂದುಳಿದ ಮತ್ತು ಬಡ ಜನರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕಿದೆ. ಅದಕ್ಕೆ ಪೂರಕವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದರು. 

ಉತ್ತರ ಪ್ರದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕರಡು ವಿದೇಯಕ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಸ್ಲಿಮರ ಜನಸಂಖ್ಯೆ ದಿಢೀರ್ ಹೆಚ್ಚಾಗಿದೆ. ಮುಸ್ಲಿಮರಲ್ಲಿ ಮೂರ್ನಾಲ್ಕು ಮದುವೆ ಆಗುವ ಪರಿಪಾಠ ಇದೆ. ಹೀಗಾಗಿ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಅನಿವಾರ್ಯವಾಗಿದೆ. ಹೀಗಾಗಿ ಮುಸ್ಲಿಮರಲ್ಲಿ ಜನಸಂಖ್ಯೆ ಹೆಚ್ಚಳ ತಗ್ಗಿಸಲು ಈ ನಿಯಮ ತರಲಾಗುತ್ತಿದೆ ಎಂದು ಅಠವಾಳೆ ಹೇಳಿದ್ದಾರೆ.

ಮೀಸಲಾತಿಯ ಪ್ರಮಾಣ ಶೇಕಡ 50 ರಷ್ಟನ್ನು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಲು ಮೀಸಲಾತಿ ಹೆಚ್ಚಿಸಲೇಬೇಕಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ' ಎಂದರು.

ಮೀಸಲಾತಿ ಪ್ರಮಾಣ ಹೆಚ್ಚಿಸಲು ಸಂವಿಧಾನದ ತಿದ್ದುಪಡಿ ಆಗಬೇಕಿದೆ. ಸಂವಿಧಾನದ 102ನೇ ವಿಧಿಯ ಪ್ರಕಾರ, ರಾಜ್ಯಗಳಿಗೂ ಮೀಸಲಾತಿ ನೀಡುವ ಅಧಿಕಾರವಿದೆ. ಈ ಎಲ್ಲವನ್ನೂ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು. ಯಾವುದೇ ಸಮುದಾಯದ ಬಡವರು, ಹಿಂದುಳಿದವರು ಮಾತ್ರ ಮೀಸಲಾತಿ ‌ಸೌಲಭ್ಯ ಪಡೆಯಬೇಕು. ಆದರೆ, ಅನರ್ಹರೇ ಮೀಸಲಾತಿ ಪಡೆಯುತ್ತಿರುವುದು ಹೆಚ್ಚುತ್ತಿದೆ. 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ‌ ಮೀಸಲಾತಿಯನ್ನು ಆ ವರ್ಗದಲ್ಲಿರುವ ಆರ್ಥಿಕವಾಗಿ ಬಲಾಢ್ಯರಾದವರೇ ಪಡೆಯುತ್ತಿದ್ದಾರೆ. ಅದನ್ನು ತಪ್ಪಿಸಲು ಕ್ರಮದ ಅಗತ್ಯವಿದೆ ಎಂದರು. ‘ದೇಶದಾದ್ಯಂತ ಜಾತಿವಾರು ಜನಗಣತಿ ನಡೆಸಬೇಕಿದೆ. ಅದರಿಂದ ಆಯಾ ಸಮುದಾಯಗಳ ಜನರಿಗೆ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ನ್ಯಾಯ ದೊರಕಿಸಲು ಸಾಧ್ಯವಾಗುತ್ತದೆ. ದೇಶದಾದ್ಯಂತ ಜಾತಿವಾರು ಜನಗಣತಿ ನಡೆಸುವಂತೆ ಪ್ರಧಾನಿಯವರನ್ನು ಒತ್ತಾಯಿಸುತ್ತೇನೆ’ ಎಂದು ಅಠಾವಳೆ ಹೇಳಿದರು.

ಸದ್ಯ ದೇಶದಲ್ಲಿ ಸದ್ದು ಮಾಡುತ್ತಿರುವ ಜಾತಿಗಣತಿ ಕುರಿತು ಅಠಾವಳೆ ಪ್ರತಿಕ್ರಿಯಿಸಿದ್ದಾರೆ. ಜಾತಿ ಗಣತಿಯಿಂದ ಕೋಮುವಾದ ಹೆಚ್ಚಾಗುವುದಿಲ್ಲ. ಜಾತಿ ಗಣತಿಯಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ವಿಚಾರದಲ್ಲಿ ಅನಕೂಲ ಆಗಲಿದೆ. ಆಯಾ ಜಾತಿಯವರು ಪ್ರಮಾಣ ಎಷ್ಟಿದೆ ಎಂದು ತಿಳಿಯಲಿದೆ. ಇದರಿಂದ ಸೌಲಭ್ಯಗಳ ಹಂಚಿಕೆ ಸುಲಭವಾಗಲಿದೆ ಎಂದಿದ್ದಾರೆ. ಆದರೆ ಆರ್ಥಿಕವಾಗಿ ಹಿಂದುಳಿದವರಿಗೆ, ದುರ್ಬಲರಿಗೆ ಅನಕೂಲಗಳು ಸಿಗಬೇಕು, ಉಳ್ಳವರಿಗಲ್ಲ ಎಂದು ಅಠಾವಳೆ ಹೇಳಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್