ಮೃತ ಮಹಿಳೆ ವಿಶಾಲಾ 
ರಾಜ್ಯ

ಉಡುಪಿ: ದುಬೈನಿಂದ ಹಿಂತಿರುಗಿದ್ದ 35 ವರ್ಷದ ಮಹಿಳೆ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ

ಆಘಾತಕಾರಿ ಘಟನೆಯಲ್ಲಿ, ಬ್ರಹ್ಮಾವರದ ಉಪ್ಪಿನಕೋಟೆಯ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.

ಬ್ರಹ್ಮಾವರ: ಆಘಾತಕಾರಿ ಘಟನೆಯಲ್ಲಿ, ಬ್ರಹ್ಮಾವರದ ಉಪ್ಪಿನಕೋಟೆಯ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.

ಪ್ರಾಥಮಿಕ ಮೂಲಗಳ ಪ್ರಕಾರ, ಭಾನುವಾರ ಕೊಲೆ ನಡೆದಿದ್ದರೂ, ಸೋಮವಾರ ಈ ಬಗ್ಗೆ ಸುದ್ದಿ ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ ದುಬೈನಿಂದ ಭಾರತಕ್ಕೆ ಮರಳಿದ ಗಂಗೊಳ್ಳಿ ಮೂಲದ ವಿಶಾಲಾ ಗಾಣಿಗ (35) ಹೀಗೆ ಶವವಾಗಿ ಪತ್ತೆಯಾಗಿರುವ ಮಹಿಳೆ. 

ಮಹಿಳೆ ತನ್ನ ತಂದೆಯೊಡನೆ ಗಂಗೊಳ್ಳಿಗೆ ತೆರಳಬೇಕಾಗಿತ್ತು ಎಂದು ವರದಿ ಹೇಳಿದೆ. ಆದರೆ ಆಕೆ ಬ್ಯಾಂಕಿನಲ್ಲಿ ಕೆಲಸವಿರುವುದಾಗಿ ಹೇಳಿದ್ದರಿಂದ ತನ್ನ ಅಪಾರ್ಟ್ ಮೆಂಟ್ ಗೆ ಮರಳಿದ್ದಳು. ಇದನ್ನು ಅನುಸರಿಸಿ ವಿಶಾಲಾ ತನ್ನ ತಂದೆಗೆ ಗಂಗೊಳ್ಳಿಗೆ ತೆರಳಲು ಹೇಳಿದ್ದಾರೆ. ಅಲ್ಲದೆ ತಾನು ಗಂಗೊಳ್ಳಿಗೆ ನಂತರ ಬಂದು ಭೇಟಿ ಆಗುವುದಾಗಿ ಹೇಳಿದ್ದರು.

ಆದರೆ ಎಷ್ಟು ಸಮಯವಾದರೂ ವಿಶಾಲಾ ಬರದಾಗ ಆಕೆಯ ತಂದೆ ಅವಳು ವಾಸಿಸುತ್ತಿದ್ದ ಅಪಾರ್ಟ್‌ಮೆಂಟ್‌ಗೆ ಆಗಮಿಸಿದ ವೇಳೆ ವಿಶಾಲಾ ಮೃತಪಟ್ಟಿರುವುದು ಗೊತ್ತಾಗಿದೆ.

ವಿಶಾಲಾಳ ಕುತ್ತಿಗೆಗೆ ಆದ ಗಾಯಗಳ ಪ್ರಕಾರ, ಕೊಲೆಗಾರರು ಅವಳನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಸಾಧ್ಯತೆ ಇದೆ.

ಉಡುಪಿ ಎಸ್ಪಿ ಎನ್ ವಿಷ್ಣುವರ್ಧನ್, ಡಿವೈಎಸ್ಪಿ ಕುಮಾರಚಂದ್ರ ಮತ್ತು ಇಲಾಖೆಯ ಇತರ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT