ಸುರೇಶ್ ಕುಮಾರ್ 
ರಾಜ್ಯ

ಗ್ರಾಮೀಣ ಪ್ರದೇಶಗಳಲ್ಲಿ ಇಂಟರ್ ನೆಟ್ ಸಮಸ್ಯೆ ಪರಿಹಾರಕ್ಕೆ ಕ್ರಮ: ಸುರೇಶ್ ಕುಮಾರ್

ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆ ಪರಿಹರಿಸುವ ಕುರಿತು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌  ಸುರೇಶ್ ಕುಮಾರ್ ಅವರು ಸೋಮವಾರ ಚರ್ಚೆ ನಡೆಸಿದರು.

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆ ಪರಿಹರಿಸುವ ಕುರಿತು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌  ಸುರೇಶ್ ಕುಮಾರ್ ಅವರು ಸೋಮವಾರ ಚರ್ಚೆ ನಡೆಸಿದರು. 

ಮಾಹಿತಿ ತಂತ್ರಜ್ಞಾನ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್ ಮತ್ತು ತಮ್ಮ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್-ವರ್ಕ್ ಪೂರೈಕೆದಾರ ಕಂಪನಿಗಳ ಜೊತೆ ಮಾಹಿತಿ ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಸಚಿವರ ಗಮನಕ್ಕೆ ತಂದಿದ್ದಾರೆ.

ಮಳೆಗಾಲ ಆಗಿರುವುದರಿಂದ ಮಲೆನಾಡು ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್-ವರ್ಕ್ ಸಮಸ್ಯೆಯಿಂದಾಗಿ ಮಕ್ಕಳ ಪರ್ಯಾಯ ಬೋಧನಾ ಕ್ರಮಗಳಾದ ಆನ್‌ಲೈನ್‌ ಬೋಧನಾ ಕ್ರಮ ಇಲ್ಲವೇ ದೂರದರ್ಶನ ಚಂದನಾ ಪಾಠಗಳಿಗೆ ತೊಂದರೆ ಆಗಿದೆ. ಈ ಕುರಿತು ತ್ವರಿತವಾಗಿ ಗಮನ ಹರಿಸುವುದರ ಅಗತ್ಯವಿದ್ದು, ಮಕ್ಕಳ ಬೋಧನಾ ವಿಧಾನದ ಗುಣಮಟ್ಟ ಕಾಪಾಡಬೇಕಾಗಿದೆ’ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್‌ ಕಾರಣ ಶಾಲೆಗಳ ಆರಂಭ ವಿಳಂಬವಾಗುತ್ತಿರುವ ಕಾರಣ ಪ್ರಸ್ತುತ ಪರ್ಯಾಯ ಬೋಧನಾ ಕ್ರಮಗಳನ್ನೇ ಅವಲಂಬಿಸಬೇಕಾಗಿದೆ. ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಬೋಧನೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಾವು ಆನ್‌ಲೈನ್‌ ವ್ಯವಸ್ಥೆಯನ್ನೇ  ನೆಚ್ಚಿಕೊಂಡಿರುವಂಥ ಸಂದರ್ಭದಲ್ಲಿ ಮೊಬೈಲ್ ನೆಟ್-ವರ್ಕ್‌ ಬಲಪಡಿಸುವುದರಿಂದ ಗ್ರಾಮೀಣ
ಪ್ರದೇಶದ ಮಕ್ಕಳಿಗೂ ಎಲ್ಲರಂತೆ ಶಿಕ್ಷಣ ದೊರೆತು ಕಲಿಕಾ ನಿರಂತರತೆಯಲ್ಲಿ ಅವರನ್ನು ತೊಡಗಿಸಬೇಕಾಗಿದೆ’ ಎಂದು ಸಚಿವರು ತಿಳಿಸಿದ್ದಾರೆ. 

ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡಾ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ಸಮರೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ದೂರದರ್ಶನ ಅಥವಾ ಮೊಬೈಲ್ ಇಲ್ಲದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಒದಗಿಸಲು ರಾಜ್ಯದಲ್ಲಿರುವ 5,766 ಗ್ರಾಮ ಪಂಚಾಯಿತಿಯ ಗ್ರಂಥಾಲಯಗಳಲ್ಲಿ ಡಿವೈಸರ್ ಅಳವಡಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಗ್ರಾಮೀಣ ಮಕ್ಕಳ ಶಿಕ್ಷಣ ಮುಂದುವರಿಕೆ ಮತ್ತು ಕಲಿಕಾ ನಿರಂತರತೆಗೆ ಅನುಕೂಲವಾಗುವಂಥ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಮುಂದಾಗಿದೆ’ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT