ಸಂಗ್ರಹ ಚಿತ್ರ 
ರಾಜ್ಯ

ಚಾಲನಾ ಪರೀಕ್ಷೆ: ಕೇಂದ್ರ ಮೋಟಾರು ವಾಹನಗಳ ನಿಯಮ ಪಾಲಿಸದ ಅಧಿಕಾರಿಗಳು, ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ

ಚಾಲನಾ ಪರವಾನಗಿ ನೀಡಲು ಪರೀಕ್ಷೆ ನಡೆಸುವಾಗ ಸಾರಿಗೆ ಇಲಾಖೆ ಅಧಿಕಾರಿಗಳು ಕೇಂದ್ರ ಮೋಟಾರು ವಾಹನಗಳ ನಿಯಮ 15 ಅನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ಬೆಂಗಳೂರು: ಚಾಲನಾ ಪರವಾನಗಿ ನೀಡಲು ಪರೀಕ್ಷೆ ನಡೆಸುವಾಗ ಸಾರಿಗೆ ಇಲಾಖೆ ಅಧಿಕಾರಿಗಳು ಕೇಂದ್ರ ಮೋಟಾರು ವಾಹನಗಳ ನಿಯಮ 15 ಅನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. 

ಚಾಲನಾ ಪರವಾನಗಿ ನೀಡಲು ಪರೀಕ್ಷೆ ನಡೆಸುವಾಗ ಸಾರಿಗೆ ಇಲಾಖೆ ಅಧಿಕಾರಿಗಳು ಕೇಂದ್ರ ಮೋಟಾರು ವಾಹನಗಳ ನಿಯಮ 15 ಅನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ಬೆಂಗಳೂರಿನ ನಿವಾಸಿ ಎಸ್.ಗೌರಿಶಂಕರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಅರ್ಜಿದಾರರು ಅತ್ಯಂತ ಗಂಭೀರ ವಿಷಯ ಎತ್ತಿದ್ದಾರೆ’ ಎಂದು ಅಭಿಪ್ರಾಯಪಟ್ಟಿತು.

ಕೆಲವು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ದಿನಕ್ಕೆ 75ರಿಂದ 100 ಜನರ ಪರೀಕ್ಷೆ ನಡೆಸಲಾಗುತ್ತಿದೆ. ಇದನ್ನು ಗಮನಿಸಿದರೆ ನಿಯಮ 15ನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ’ ಎಂದು ಅರ್ಜಿದಾರರು ದೂರಿದರು.

ನಿಯಮ 15ರ ಪ್ರಕಾರ ಪ್ರತಿ ಪರೀಕ್ಷೆಯನ್ನೂ ಸೂಕ್ಷ್ಮವಾಗಿ ಪರಿಗಣಿಸಿ ಅಧಿಕಾರಿಗಳು ಅಭಿಪ್ರಾಯ ದಾಖಲಿಸಬೇಕು. ಅದೊಂದು ವಿಸ್ತೃತ ಪ್ರಕ್ರಿಯೆಯಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ದೆಹಲಿಯಲ್ಲಿ ಹೆಚ್ಚಿದ ಭದ್ರತೆ

77ನೇ ಗಣರಾಜ್ಯೋತ್ಸವ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಭದ್ರತೆ, ಹಲವೆಡೆ ಸಂಚಾರ ನಿಷೇಧ

ಒಂದೇ ತ್ರಿವರ್ಣ ಧ್ವಜ, ವಿಭಿನ್ನ ಗೌರವ: ಗಣರಾಜ್ಯೋತ್ಸವದಂದು ರಾಷ್ಟ್ರಪತಿಗಳೇ ಏಕೆ ಧ್ವಜಾರೋಹಣ ನೆರವೇರಿಸುತ್ತಾರೆ ಗೊತ್ತಾ...?

Padma Awards 2026: ಕರ್ನಾಟಕದ 8 ಮಂದಿ ಸೇರಿದಂತೆ ದೇಶಾದ್ಯಂತ 131 ಸಾಧಕರಿಗೆ ಪದ್ಮ ಪ್ರಶಸ್ತಿ ಘೋಷಣೆ!

60 ಎಸೆತಗಳಲ್ಲಿ 155 ರನ್; ನ್ಯೂಜಿಲ್ಯಾಂಡ್ ವಿರುದ್ಧ ದಾಖಲೆಯ ಗೆಲುವು; T20 ಸರಣಿ ಭಾರತ ಕೈವಶ!

SCROLL FOR NEXT