ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಜನರಿಗೆ ವಂಚನೆ ಯತ್ನ

ಅಪರಿಚಿತ ದುಷ್ಕರ್ಮಿಯೊಬ್ಬ ನಿವೃತ್ತ ಪೊಲೀಸ್ ಅಧಿಕಾರಿ ಬಿಬಿ ಅಶೋಕ್ ಕುಮಾರ್ ಅವರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ವಂಚಿಸಲು ಯತ್ನಿಸಿದ್ದಾನೆ.

ಬೆಂಗಳೂರು: ಅಪರಿಚಿತ ದುಷ್ಕರ್ಮಿಯೊಬ್ಬ ನಿವೃತ್ತ ಪೊಲೀಸ್ ಅಧಿಕಾರಿ ಬಿಬಿ ಅಶೋಕ್ ಕುಮಾರ್ ಅವರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ವಂಚಿಸಲು ಯತ್ನಿಸಿದ್ದಾನೆ.

ಆರೋಪಿಯು ಅಧಿಕಾರಿಯ ಸಂಪರ್ಕಗಳಿಂದ ಹಣಕಾಸಿನ ಸಹಾಯವನ್ನು ಕೋರಿದ್ದಾನೆ. ಪ್ರಕರಣ ದಾಖಲಿಸಲು ಅಶೋಕ್ ಕುಮಾರ್ ಸಿಇಎನ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರೂ, ಯಾವುದೇ ಎಫ್‌ಐಆರ್ ದಾಖಲಾಗಿಲ್ಲ.

ಅಶೋಕ್ ಕುಮಾರ್ ಅವರು  ದೂರವಾಣಿ ಮೂಲಕ ನಮ್ಮನ್ನು ಸಂಪರ್ಕಿಸಿ ಘಟನೆ ಬಗ್ಗೆ ದೂರು ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೂರುದಾರರ ಹೆಸರಿನಲ್ಲಿರುವ ನಕಲಿ ಖಾತೆಯನ್ನು ತೆಗೆದುಹಾಕುವಂತೆ ನಾವು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಅಶೋಕ್ ಕುಮಾರ್ ಅವರ ಲಿಖಿತ ದೂರು ಇಲ್ಲದಿರುವುದರಿಂದ, ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. 

ಹಣ ಸುಲಿಗೆ ಮಾಡುವ ಉದ್ದೇಶದಿಂದ ನಕಲಿ ಖಾತೆಗಳನ್ನು ರಚಿಸುವ ಮತ್ತು ವಿಐಪಿಗಳ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಹ್ಯಾಕ್ ಮಾಡುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಶೋಕ್ ಕುಮಾರ್ ಅವರ ಅಭಿಮಾನಿ ಅರುಣ್ ಜಾದವ್  ನಗರ ಪೊಲೀಸ್ ಆಯುಕ್ತರಿಗೆ ಪತ್ರ ನೀಡಿದ್ದಾರೆ.

ಅಪರಿಚಿತ ಸಂಖ್ಯೆಯಿಂದ ಸಂದೇಶ ಸ್ವೀಕರಿಸಿದ ನನ್ನ ಸ್ನೇಹಿತರೊಬ್ಬರು ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಾಗ ನಾನು ಈ ಬಗ್ಗೆ ತಿಳಿದುಕೊಂಡೆ. ವೈದ್ಯಕೀಯ ತುರ್ತುಸ್ಥಿತಿ ಇದೆ ಎಂಬ ಕಾರಣ ನೀಡಿ ಪದೇ ಪದೇ ಹಣ ವರ್ಗಾವಣೆ ಮಾಡಲು ಒತ್ತಾಯಿಸಿದರು. ದುಷ್ಕರ್ಮಿಗೆ ಕರೆ ಮಾಡಿ ಕೇಳಿದಾಗ, ಆತ ಸಂದೇಶ ಕಳುಹಿಸುವುದನ್ನು ನಿಲ್ಲಿಸಿದ. ಇದು ಎರಡನೇ ಬಾರಿಗೆ ನಡೆಯುತ್ತಿರುವುದರಿಂದ, ನಾನು ದೂರು ಸಲ್ಲಿಸಲು ನಿರ್ಧರಿಸಿದೆ ಎಂದು ಅಶೋಕ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!